ರಾಜ್ಯ

ರಾಜ್ಯದ ಕೈಗಾರಿಕಾ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ತ್ವರಿತ ಕ್ರಮಕ್ಕೆ ಸೂಚನೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಇಲ್ಲಿ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಿದರು. ಜೊತೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದ್ದರು.

ಖನಿಜ ಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ, ಬೆಂಗಳೂರು ಜಲ ಮಂಡಲಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪಾಟೀಲ, `ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿವೆ. ಇದಲ್ಲದೆ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ 45 ಎಂಎಲ್.ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.

ಇದನ್ನು ಹಿಡಕಲ್ ಜಲಾಶಯದಿಂದ ಪೂರೈಸಬಹುದು. ಹಾಗೆಯೇ, ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ಕೂಡ ಕೃಷ್ಣಾ ಜಲಾಶಯದಿಂದ ನಿತ್ಯವೂ ಇಷ್ಟೇ ಪ್ರಮಾಣದ ಕುಡಿಯುವ ನೀರು ಪೂರೈಸಬೇಕಾಗಿದೆ.

ಕಲಬುರಗಿ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಮತ್ತು ಭೀಮಾ ನದಿಗಳಿಂದ ದಿನವೂ 7 ಎಂಎಲ್ ಡಿ, ಬಳ್ಳಾರಿ ಕೈಗಾರಿಕಾ ಪ್ರದೇಶಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 13 ಎಂಎಲ್ ಡಿ, ರಾಯಚೂರು ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ನದಿಯಿಂದ 13 ಎಂಎಲ್ ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.

ಒಟ್ಟಾರೆ ಪ್ರತಿನಿತ್ಯ 290 ಎಂ.ಎಲ್.ಡಿ ನೀರು ಈ ಜಿಲ್ಲೆಗಳಿಗೆ ಬೇಕಾಗಿದೆ. ಇದನ್ನು ಬಗೆಹರಿಸದೆ ಹಾಗೆಯೇ ಬಿಟ್ಟರೆ ರಾಜ್ಯದ ಕೈಗಾರಿಕಾ ಬೆಳವಣಿಗೆಯೇ ಹಿನ್ನಡೆ ಕಾಣಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಅದನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಲಾಗುತ್ತಿದೆ.

ಆದರೆ, ಇಲ್ಲೆಲ್ಲ ಕುಡಿಯುವ ನೀರಿನ ವಿಪರೀತ ಅಭಾವವಿದೆ. ಆದ್ದರಿಂದ, ಎಲ್ಲೆಲ್ಲಿ ಎಷ್ಟು ನೀರಿನ ಲಭ್ಯತೆ ಇದೆ, ಇಲ್ಲಿಗೆಲ್ಲ ಯಾವ್ಯಾವ ಮೂಲಗಳಿಂದ ಕುಡಿಯುವ ನೀರನ್ನು ಪೂರೈಸಬಹುದು ಎಂದು ಕಂಡುಕೊಳ್ಳಬೇಕು. ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಅವರು ನುಡಿದರು.

ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ ಹೇಳಿದರು.

andolanait

Recent Posts

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

1 hour ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

1 hour ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

3 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

3 hours ago

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…

4 hours ago

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

6 hours ago