ರಾಜ್ಯ

ರಾಜ್ಯದ ಕೈಗಾರಿಕಾ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ತ್ವರಿತ ಕ್ರಮಕ್ಕೆ ಸೂಚನೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಇಲ್ಲಿ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಿದರು. ಜೊತೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದ್ದರು.

ಖನಿಜ ಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ, ಬೆಂಗಳೂರು ಜಲ ಮಂಡಲಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪಾಟೀಲ, `ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿವೆ. ಇದಲ್ಲದೆ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ 45 ಎಂಎಲ್.ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.

ಇದನ್ನು ಹಿಡಕಲ್ ಜಲಾಶಯದಿಂದ ಪೂರೈಸಬಹುದು. ಹಾಗೆಯೇ, ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ಕೂಡ ಕೃಷ್ಣಾ ಜಲಾಶಯದಿಂದ ನಿತ್ಯವೂ ಇಷ್ಟೇ ಪ್ರಮಾಣದ ಕುಡಿಯುವ ನೀರು ಪೂರೈಸಬೇಕಾಗಿದೆ.

ಕಲಬುರಗಿ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಮತ್ತು ಭೀಮಾ ನದಿಗಳಿಂದ ದಿನವೂ 7 ಎಂಎಲ್ ಡಿ, ಬಳ್ಳಾರಿ ಕೈಗಾರಿಕಾ ಪ್ರದೇಶಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 13 ಎಂಎಲ್ ಡಿ, ರಾಯಚೂರು ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ನದಿಯಿಂದ 13 ಎಂಎಲ್ ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.

ಒಟ್ಟಾರೆ ಪ್ರತಿನಿತ್ಯ 290 ಎಂ.ಎಲ್.ಡಿ ನೀರು ಈ ಜಿಲ್ಲೆಗಳಿಗೆ ಬೇಕಾಗಿದೆ. ಇದನ್ನು ಬಗೆಹರಿಸದೆ ಹಾಗೆಯೇ ಬಿಟ್ಟರೆ ರಾಜ್ಯದ ಕೈಗಾರಿಕಾ ಬೆಳವಣಿಗೆಯೇ ಹಿನ್ನಡೆ ಕಾಣಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಅದನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಲಾಗುತ್ತಿದೆ.

ಆದರೆ, ಇಲ್ಲೆಲ್ಲ ಕುಡಿಯುವ ನೀರಿನ ವಿಪರೀತ ಅಭಾವವಿದೆ. ಆದ್ದರಿಂದ, ಎಲ್ಲೆಲ್ಲಿ ಎಷ್ಟು ನೀರಿನ ಲಭ್ಯತೆ ಇದೆ, ಇಲ್ಲಿಗೆಲ್ಲ ಯಾವ್ಯಾವ ಮೂಲಗಳಿಂದ ಕುಡಿಯುವ ನೀರನ್ನು ಪೂರೈಸಬಹುದು ಎಂದು ಕಂಡುಕೊಳ್ಳಬೇಕು. ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಅವರು ನುಡಿದರು.

ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ ಹೇಳಿದರು.

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

4 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

4 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

4 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

4 hours ago