ರಾಜ್ಯ

ರಾಜ್ಯದ ಕೈಗಾರಿಕಾ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ತ್ವರಿತ ಕ್ರಮಕ್ಕೆ ಸೂಚನೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಇಲ್ಲಿ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಿದರು. ಜೊತೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದ್ದರು.

ಖನಿಜ ಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ, ಬೆಂಗಳೂರು ಜಲ ಮಂಡಲಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪಾಟೀಲ, `ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿವೆ. ಇದಲ್ಲದೆ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ 45 ಎಂಎಲ್.ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.

ಇದನ್ನು ಹಿಡಕಲ್ ಜಲಾಶಯದಿಂದ ಪೂರೈಸಬಹುದು. ಹಾಗೆಯೇ, ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ಕೂಡ ಕೃಷ್ಣಾ ಜಲಾಶಯದಿಂದ ನಿತ್ಯವೂ ಇಷ್ಟೇ ಪ್ರಮಾಣದ ಕುಡಿಯುವ ನೀರು ಪೂರೈಸಬೇಕಾಗಿದೆ.

ಕಲಬುರಗಿ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಮತ್ತು ಭೀಮಾ ನದಿಗಳಿಂದ ದಿನವೂ 7 ಎಂಎಲ್ ಡಿ, ಬಳ್ಳಾರಿ ಕೈಗಾರಿಕಾ ಪ್ರದೇಶಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 13 ಎಂಎಲ್ ಡಿ, ರಾಯಚೂರು ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ನದಿಯಿಂದ 13 ಎಂಎಲ್ ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.

ಒಟ್ಟಾರೆ ಪ್ರತಿನಿತ್ಯ 290 ಎಂ.ಎಲ್.ಡಿ ನೀರು ಈ ಜಿಲ್ಲೆಗಳಿಗೆ ಬೇಕಾಗಿದೆ. ಇದನ್ನು ಬಗೆಹರಿಸದೆ ಹಾಗೆಯೇ ಬಿಟ್ಟರೆ ರಾಜ್ಯದ ಕೈಗಾರಿಕಾ ಬೆಳವಣಿಗೆಯೇ ಹಿನ್ನಡೆ ಕಾಣಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಅದನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಲಾಗುತ್ತಿದೆ.

ಆದರೆ, ಇಲ್ಲೆಲ್ಲ ಕುಡಿಯುವ ನೀರಿನ ವಿಪರೀತ ಅಭಾವವಿದೆ. ಆದ್ದರಿಂದ, ಎಲ್ಲೆಲ್ಲಿ ಎಷ್ಟು ನೀರಿನ ಲಭ್ಯತೆ ಇದೆ, ಇಲ್ಲಿಗೆಲ್ಲ ಯಾವ್ಯಾವ ಮೂಲಗಳಿಂದ ಕುಡಿಯುವ ನೀರನ್ನು ಪೂರೈಸಬಹುದು ಎಂದು ಕಂಡುಕೊಳ್ಳಬೇಕು. ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಅವರು ನುಡಿದರು.

ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ ಹೇಳಿದರು.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

3 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

5 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

5 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

5 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

7 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

8 hours ago