Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಇಂದು ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 2025ರ ಮೇ, ಆಗಸ್ಟ್‌ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆಯಾಗಿಲ್ಲ ಎಂದು ಹೇಳಿದರು.

2025-26ನೇ ಸಾಲಿನ ಹಿಂಗಾರು ಹಂಗಾಮಿಗೆ 18.21 ಲಕ್ಷ ಮೆಟ್ರಿಕ್‌ ಟನ್‌ ವಿವಿಧ ಶ್ರೇಣಿಯ ರಸಗೊಬ್ಬರಗಳ ಬೇಡಿಕೆಯಿರುತ್ತದೆ. ಅಕ್ಟೋಬರ್.‌2025ರಿಂದ ಜನವರಿ.2026ರವರೆಗೆ 12.46 ಲಕ್ಷ ಮೆಟ್ರಿಕ್‌ ಟನ್‌ ಬೇಡಿಕೆಯಿದ್ದು, 27ನೇ ಜನವರಿ 2026ರವರೆಗೆ 21.89 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರಗಳು ಸರಬರಾಜಾಗಿರುತ್ತದೆ. ಇದರಲ್ಲಿ 11.71 ಲಕ್ಷ ಮೆಟ್ರಿಕ್‌ ಟನ್‌ ಮಾರಾಟವಾಗಿ, 10.18 ಲಕ್ಷ ಮೆಟ್ರಿಕ್‌ ಟನ್‌ ದಾಸ್ತಾನಿರುತ್ತದೆ. ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ರಸಗೊಬ್ಬರ ಸರಬರಾಜಾಗುತ್ತಿದೆ ಎಂದು ಹೇಳಿದರು.

 

Tags:
error: Content is protected !!