ರಾಜ್ಯ

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಇಂದು ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 2025ರ ಮೇ, ಆಗಸ್ಟ್‌ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆಯಾಗಿಲ್ಲ ಎಂದು ಹೇಳಿದರು.

2025-26ನೇ ಸಾಲಿನ ಹಿಂಗಾರು ಹಂಗಾಮಿಗೆ 18.21 ಲಕ್ಷ ಮೆಟ್ರಿಕ್‌ ಟನ್‌ ವಿವಿಧ ಶ್ರೇಣಿಯ ರಸಗೊಬ್ಬರಗಳ ಬೇಡಿಕೆಯಿರುತ್ತದೆ. ಅಕ್ಟೋಬರ್.‌2025ರಿಂದ ಜನವರಿ.2026ರವರೆಗೆ 12.46 ಲಕ್ಷ ಮೆಟ್ರಿಕ್‌ ಟನ್‌ ಬೇಡಿಕೆಯಿದ್ದು, 27ನೇ ಜನವರಿ 2026ರವರೆಗೆ 21.89 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರಗಳು ಸರಬರಾಜಾಗಿರುತ್ತದೆ. ಇದರಲ್ಲಿ 11.71 ಲಕ್ಷ ಮೆಟ್ರಿಕ್‌ ಟನ್‌ ಮಾರಾಟವಾಗಿ, 10.18 ಲಕ್ಷ ಮೆಟ್ರಿಕ್‌ ಟನ್‌ ದಾಸ್ತಾನಿರುತ್ತದೆ. ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ರಸಗೊಬ್ಬರ ಸರಬರಾಜಾಗುತ್ತಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಂಟಳ್ಳಿ ಯೋಜನೆಗೆ ಡಿ.ಪಿ.ಆರ್ʼಗೆ ಒತ್ತಾಯಸಿ ಬೃಹತ್‌ ಪ್ರತಿಭಟನೆ

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…

3 mins ago

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

21 mins ago

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

2 hours ago

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

2 hours ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

2 hours ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…

3 hours ago