ರಾಜ್ಯ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ: ಜನಾರ್ದನ ರೆಡ್ಡಿ

ಗಂಗಾವತಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆಗೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಪಕ್ಷವು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿದೆ ಎಂದು ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಘರ್ ವಾಪ್ಸಿ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಹೊಸ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈ ಮೊದಲು ಬಿಜೆಪಿಯಲ್ಲಿದ್ದು ಆನಂತರ ಪಕ್ಷದಿಂದ ದೂರಾಗಿರುವ ಪ್ರಬಲ ನಾಯಕರನ್ನು ಪುನಃ ಬಿಜೆಪಿಯತ್ತ ಸೆಳೆಯುವ ಪ್ರಯತ್ನದ ಬೆನ್ನಲ್ಲೇ ಜನಾರ್ದನ ರೆಡ್ಡಿಯ ಈ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

ನಿನ್ನೆ (ಜ. 27) ಕೊಪ್ಪಳದಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಶತಮಾನಗಳ ಹೋರಾಟದ ನಂತರ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲಾ ನಾಗರಿಕರ ಕನಸನ್ನು ನನಸು ಮಾಡಿದ್ದಾರೆ. ಹಾಗಾಗಿ, ಮತ್ತೊಮ್ಮೆ ಮೋದಿಯವರು ಈ ದೇಶದ ಪ್ರಧಾನಿಯಾಗಬೇಕು. ಲೋಕಸಭೆ ಚುನಾವಣೆಯಲ್ಲಿ ಕೆಆರ್‌ಪಿಪಿ ಕೂಡ ಸ್ಪರ್ಧಿಸಲಿದೆ. ಅಂದಾಜು ನಾಲ್ಕೈದು ಕ್ಷೇತ್ರಗಳಲ್ಲಿ ನಾವು ನಮ್ಮ ಅಭ್ಯರ್ಥಿಗಳನ್ನು ಹಾಕುತ್ತೇನೆ. ನಮ್ಮ ಅಭ್ಯರ್ಥಿಗಳು ಗೆದ್ದ ನಂತರ ನಾವು ಬಿಜೆಪಿಯನ್ನು ಬೆಂಬಲಿಸುತ್ತೇವೆ’’ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನವೇ ಜನಾರ್ದನ ರೆಡ್ಡಿಯವರನ್ನು ಬಿಜೆಪಿಗೆ ಸೆಳೆಯಬೇಕು. ಕೆಆರ್‌ಪಿಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಗಾಲಿ ಜನಾರ್ದನ ರೆಡ್ಡಿಯವರನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕು. ಅದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಲವಾರು ಜಿಲ್ಲೆಗಳ ಮೇಲೆ ಬಿಜೆಪಿ ಪ್ರಭಾವ ಬೀರಬಹುದು ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ.

ಕೆಆರ್‌ಪಿಪಿ ಪಕ್ಷದ ಮುಖಂಡ ಚಂದ್ರಶೇಖರಯ್ಯ ಎಂ.ಹಿರೇಮಠ ಅವರ ಮನೆಯಲ್ಲಿ ವಿದ್ಯುತ್‌ ಅವಘಡ ಸಂಭವಿಸಿದ ಹಿನ್ನೆಲೆ ಶಾಸಕ ಗಾಲಿ ಜನಾರ್ದನರೆಡ್ಡಿ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಪಕ್ಷದ ಮುಖಂಡರ ಮನೆಯಲ್ಲಿ ವಿದ್ಯುತ್‌ ಅವಘಡ ಸಂಭವಿಸಿದ್ದು, ಕುಟುಂಬವನ್ನು ಭೇಟಿಯಾಗಿ ಧೈರ್ಯ ತುಂಬಿರುವೆ ಎಂದರು.

ಲೋಕ ಚುನಾವಣೆಗೆ ಸಂಬಂಧಿಸಿದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೆಚ್ಚು ಸ್ಥಾನ ಗೆಲ್ಲಿಸಲು ಶ್ರಮಿಸುವೆ. ಕಾಂಗ್ರೆಸ್‌ ಜತೆಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ತಮ್ಮ ನಿಲುವು ಹೇಳಿದರು.

ಕೆಆರ್‌ಪಿಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ, ಜಿಲ್ಲಾಧ್ಯಕ್ಷ ಸಂಗಮೇಶ ಬಾದವಾಡಗಿ, ವೀರೇಶ ಕಲ್ಗುಡಿ, ಕೆ.ಶಶಿ ಸೇರಿದಂತೆ ಇತರರು ಜೊತೆಯಲ್ಲಿದ್ದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

6 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

6 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago