ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನನ್ನ ಬೆಂಬಲ. ಈಗ ಕೇವಲ ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನೆ. ಟೆಕ್ನಿಕಲಿ ನಾನು ಬಿಜೆಪಿ ಸದಸ್ಯನಾಗಿದ್ದೇನೆ ಎಂದು ತಿಳಿಸಿದ್ದಾರೆ.
ನಮ್ಮ ಮನೆ ಕಾಂಗ್ರೆಸ್, ಆದರೆ ಸುಮ್ಮನೆ ಬಿಜೆಪಿಯಲ್ಲಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ನೇರವಾಗಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ನಿನ್ನೆ ಕಾಂಗ್ರೆಸ್ ಶಾಸಕಾಂಗ ಸಭೆಗೆ ಹೋಗಿದ್ದೂ ನಿಜ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನನ್ನನ್ನು ಔತಣ ಕೂಟಕ್ಕೆ ಕರೆದಿದ್ದರೂ. ಆದರೆ ಸಭೆಗೆ ಅಲ್ಲ. ಔತಣಕೂಟ ನಡೆಯುವ ಸ್ಥಳದ ಬದಲಾಗಿ ತಿಳಿಯದೆ ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಹೋದೆ ಎಂದು ತಿಳಿಸಿದರು.
ಡಿ.ಕೆ.ಶಿವಕುಮಾರ್ ಬನ್ನಿ ಎಂದು ಕರೆದಿದ್ದ ಕಾರಣ ಸಭೆಯಲ್ಲಿ ಕೂತಿದ್ದೆ. ನಂತರ ನಾನು ಊಟಕ್ಕೆ ತೆರಳಿದೆ. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಹಾಬೇಕು ಎಂದು ಚರ್ಚೆ ನಡೆಸಿದರು ಎಂದು ತಿಳಿಸಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…