ರಾಜ್ಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ: ಹೆಚ್.ವಿಶ್ವನಾಥ್‌

ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನನ್ನ ಬೆಂಬಲ. ಈಗ ಕೇವಲ ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನೆ. ಟೆಕ್ನಿಕಲಿ ನಾನು ಬಿಜೆಪಿ ಸದಸ್ಯನಾಗಿದ್ದೇನೆ ಎಂದು ತಿಳಿಸಿದ್ದಾರೆ.

ನಮ್ಮ ಮನೆ ಕಾಂಗ್ರೆಸ್‌, ಆದರೆ ಸುಮ್ಮನೆ ಬಿಜೆಪಿಯಲ್ಲಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ನೇರವಾಗಿ ಹೆಚ್‌.ವಿಶ್ವನಾಥ್‌ ಹೇಳಿದ್ದಾರೆ.

ನಿನ್ನೆ ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಹೋಗಿದ್ದೂ ನಿಜ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನನ್ನನ್ನು ಔತಣ ಕೂಟಕ್ಕೆ ಕರೆದಿದ್ದರೂ. ಆದರೆ ಸಭೆಗೆ ಅಲ್ಲ. ಔತಣಕೂಟ ನಡೆಯುವ ಸ್ಥಳದ ಬದಲಾಗಿ ತಿಳಿಯದೆ ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಹೋದೆ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್‌ ಬನ್ನಿ ಎಂದು ಕರೆದಿದ್ದ ಕಾರಣ ಸಭೆಯಲ್ಲಿ ಕೂತಿದ್ದೆ. ನಂತರ ನಾನು ಊಟಕ್ಕೆ ತೆರಳಿದೆ. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಹಾಬೇಕು ಎಂದು ಚರ್ಚೆ ನಡೆಸಿದರು ಎಂದು ತಿಳಿಸಿದರು.

andolanait

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

52 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

1 hour ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

2 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

4 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

4 hours ago