ರಾಜ್ಯ

ಡಿಕೆಶಿ ಸಿಎಂ ಆದ್ರೆ ಜೆಡಿಎಸ್ ಶಾಸಕರ ಬೆಂಬಲ : ಎಚ್‌.ಡಿ ಕುಮಾರಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಯ ಬಹಿರಂಗ ಹೇಳಿಕೆಗಳು ಜೋರಾದ ಮೇಲೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಚಿವರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರು ಸಖತ್ ಟಾಂಗ್ ಕೊಟ್ಟಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಎಚ್‌.ಡಿ ಕುಮಾರಸ್ವಾಮಿ ಅವರು ನಾಳೆ ಬೆಳಗ್ಗೆಯೇ ಡಿ.ಕೆ. ಶಿವಕುಮಾರ್ ಸಿಎಂ ಆದರೆ ಜೆಡಿಎಸ್​ನ 19 ಶಾಸಕರೂ ಬೆಂಬಲ ಕೊಡುತ್ತೇವೆ. ಡಿಕೆ ಶಿವಕುಮಾರ್ ಅವರು ಬೇಕಿದ್ರೆ ಸಿಎಂ ಆಗಲಿ. ನಾವೂ ಸಹ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ಘೋಷಣೆ ಮಾಡಿದರು.

ಸುದ್ದಿಗಾರರೊಂದಿಗೆ ವ್ಯಂಗ್ಯವಾಗೇ ಮಾತನಾಡಿರುವ ಎಚ್‌.ಡಿ ಕುಮಾರಸ್ವಾಮಿ ಅವರು ನಾನ್ಯಾಕೆ ಅವರಿಗೆ ಅಡ್ಡಿಯಾಗಲಿ. ನಮ್ಮ ಎಂಎಲ್‌ಎಗಳಿಗೆ ದಿನ ಬೆಳಗಾದ್ರೆ ಪಕ್ಷಕ್ಕೆ ಬನ್ನಿ ಅಂತ ಅರ್ಜಿ ಹಾಕಿ ಕರೆಯುತ್ತಿದ್ದಾರೆ. ಯಾಕೆ ಸುಮ್ನೆ ಜೆಡಿಎಸ್‌ ನಾಯಕರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಲು ಕರೆಯುತ್ತಿದ್ದಾರೆ. ನನಗೇನೂ ವೈರತ್ವ ಇಲ್ಲ ನಾವೇ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಸಿಎಂ ಆಗಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

 

lokesh

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

18 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

24 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago