ರಾಜ್ಯ

ಬರ ಪರಿಹಾರಕ್ಕೆ ಸಮ್ಮತಿಸಿದ ಸುಪ್ರೀಂ : ಇದು ಮೊದಲ ಹಂತದ ಜಯ ಎಂದ ಕಾಂಗ್ರೆಸ್‌ !

ಬೆಂಗಳೂರು: ರಾಜ್ಯಕ್ಕೆ ಬರಬೇಕಿದ್ದ ಬರ ಪರಿಹಾರ ವಿಷಯದಲ್ಲಿ ಸುಪ್ರೀಂ ಮಧ್ಯಸ್ಥಿಕೆವಹಿಸಿ ರಾಜ್ಯದ ರೈತರಿಗೆ ನ್ಯಾಯ ದೊರಕಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್‌ ಘಟಕ ಸ್ವಾಗತಿಸಿದೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಸ್ಥಿಕೆಗೆ ಧನ್ಯವಾದ ಹೇಳಿದ್ದಾರೆ. 2023ರ ಸೆಪ್ಟಂಬರ್‌ ತಿಂಗಳಿನಲ್ಲಿ ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಬರ ಪರಿಹಾರ ನೀಡದ ಕೇಂದ್ರದ ನಿಲುವಿನ ಬಗ್ಗೆ ನ್ಯಾಯಾಲಯದಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಹೋರಾಟಕ್ಕೆ ಯಶಸ್ಸು ಸಿಕ್ಕದೆ ಎಂದು ಪೋಸ್ಟ್‌ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಈ ಕುರಿತು ರಾಮನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಒಕ್ಕೂಟದ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಸದ ಡಿ.ಕೆ ಸುರೇಶ್‌ ಅವರು ಧ್ವನಿ ಎತ್ತಿದ್ದರು. ನಾವೆಲ್ಲರೂ ಸೇರಿ ನಡೆಸಿದ ಹೋರಾಟದಿಂದಾಗಿ ನಮಗೆ ನ್ಯಾಯ ಸಿಕ್ಕಿದೆ. ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್‌ ಘಟಕ ತನ್ನ ಎಕ್ಸ್‌ ಖಾತೆಯಲ್ಲಿ ಪೊಸ್ಟ್‌ ಮಾಡಿ, ಬರ ಪರಿಹಾರದ ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಹಂತದ ಜಯ ಸಿಕ್ಕಿದೆ. ಒಂದು ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಕೇಂದ್ರ ಸರ್ಕಾರ ಒಪ್ಪಿದೆ, ಇದು ಸ್ವಾಗತರ್ಹ ಎಂದಿದೆ.

ಚುನಾವಣಾ ಭಾಷಣದಲ್ಲಿ ಸುಳ್ಳು ಹೇಳುವ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಬಾಲ ಮುದುರಿ ಒಪ್ಪಿಕೊಂಡಿದೆ. ಕನ್ನಡಿಗರ ಹಿತ ಕಾಯುವ ದೃಷ್ಟಿಯಿಂದ ಕೋರ್ಟ್ ಮೆಟ್ಟಿಲೇರುವ ಕರ್ನಾಟಕ ಸರ್ಕಾರದ ದಿಟ್ಟ ನಿರ್ಧಾರದಿಂದ ಕನ್ನಡದ ರೈತರಲ್ಲಿ ಆಶಾಭಾವನೆ ಮೂಡುವಂತಾಗಿದೆ. ಈ ಹೋರಾಟದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜೊತೆ ಕೈಜೋಡಿಸಿ ಬೆಂಬಲವಾಗಿ ನಿಂತ ರಾಜ್ಯದ ರೈತರು ಹಾಗೂ ಪ್ರಜ್ಞಾವಂತ ಜನತೆಗೆ ಧನ್ಯವಾದಗಳನ್ನು ತಿಳಿಸಿದೆ.

ಇನ್ನೂ ಸಚಿವ ಸಂಪುಟದ ಹಲವಾರು ನಾಯಕರು ಕನ್ನಡದ ರೈತರ ಹಿತ ಕಾಯುವ ನಮ್ಮ ಬದ್ಧತೆಗೆ ಗೆಲುವು ಸಿಕ್ಕಿದೆ ಎಂದಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

1 hour ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

2 hours ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 hours ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

3 hours ago