ರಾಜ್ಯ

ಬೋರ್ಡ್‌ ಪರೀಕ್ಷೆಗೆ ಸುಪ್ರೀಂ ತಡೆ !

ಬೆಂಗಳೂರು: ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು.

ಈ ಬೆನ್ನಲ್ಲೇ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ರದ್ದುಗೊಂಡೆತೆ ಆಗಿದೆ.

ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಇಂದು ವಿಚಾರಣೆ ನಡೆಸಿತು.

ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ. ಆದರೇ 11ನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ ನ್ಯಾಯಪೀಠವು ಯಾವುದೇ ಆದೇಶ ಮಾಡಿಲ್ಲ.

andolanait

Recent Posts

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

14 mins ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

50 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

4 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

4 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

4 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

4 hours ago