ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ.
ಜಿಬಿಎಗೆ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಎಜಿ ಶಶಿಕಿರಣ್ ವಾದಿಸಿದರು.
ಕಡೆಯ ಹಂತದ ಮೀಸಲಾತಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಮೀಸಲಾತಿ ಪ್ರಕ್ರಿಯೆ ಫೆಬ್ರವರಿ.28ರವೆರೆಗೂ ನಡೆಯಲಿದೆ. ಮೀಸಲಾತಿ ಪ್ರಕ್ರಿಯೆ ಬಳಿಕ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಸರ್ಕಾರದ ವಕೀಲ ಅಭಿಷೇಕ್ ಮನುಸಿಂಘ್ವಿ ತಿಳಿಸಿದರು.
ಚುನಾವಣಾ ಆಯೋಗದ ಪರ ವಕೀಲರು ಮಾರ್ಚ್.16ರ ವೇಳೆಗೆ ಮತದಾರರ ಪರಿಶೀಲನೆ ಅಂತ್ಯವಾಗಲಿದೆ. ಬಳಿಕ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಮೇ ಕೊನೆ ವಾರದವರೆಗೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಂತಿಮವಾಗಿ ಚುನಾವಣಾ ಪ್ರಕ್ರಿಯೆ ಮುಗಿಸಲು ಎಷ್ಟು ಸಮಯಬೇಕು ಎಂದು ಕೋರ್ಟ್ ಪ್ರಶ್ನಿಸಿತು. ಇದಕ್ಕೆ ಜೂನ್ವರೆಗೂ ಸಮಯ ಬೇಕಾಗಬಹುದು ಎಂದು ಆಯೋಗ ಉತ್ತರಿಸಿತು. ಸುಪ್ರೀಂಕೋರ್ಟ್ ಜೂನ್.30ರೊಳಗೆ ಜಿಬಿಎ ಚುನಾವಣೆ ನಡೆಸಲು ನಿರ್ದೇಶನ ನೀಡಿತು. ಇದರ ಜೊತೆಗೆ ರಾಜ್ಯ ಸರ್ಕಾರಕ್ಕೆ ಮತ್ತೆ ಸಮಯ ಕೇಳದಂತೆ ಎಚ್ಚರಿಕೆ ನೀಡಿತು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…