ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ.
ಜಿಬಿಎಗೆ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಎಜಿ ಶಶಿಕಿರಣ್ ವಾದಿಸಿದರು.
ಕಡೆಯ ಹಂತದ ಮೀಸಲಾತಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಮೀಸಲಾತಿ ಪ್ರಕ್ರಿಯೆ ಫೆಬ್ರವರಿ.28ರವೆರೆಗೂ ನಡೆಯಲಿದೆ. ಮೀಸಲಾತಿ ಪ್ರಕ್ರಿಯೆ ಬಳಿಕ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಸರ್ಕಾರದ ವಕೀಲ ಅಭಿಷೇಕ್ ಮನುಸಿಂಘ್ವಿ ತಿಳಿಸಿದರು.
ಚುನಾವಣಾ ಆಯೋಗದ ಪರ ವಕೀಲರು ಮಾರ್ಚ್.16ರ ವೇಳೆಗೆ ಮತದಾರರ ಪರಿಶೀಲನೆ ಅಂತ್ಯವಾಗಲಿದೆ. ಬಳಿಕ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಮೇ ಕೊನೆ ವಾರದವರೆಗೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಂತಿಮವಾಗಿ ಚುನಾವಣಾ ಪ್ರಕ್ರಿಯೆ ಮುಗಿಸಲು ಎಷ್ಟು ಸಮಯಬೇಕು ಎಂದು ಕೋರ್ಟ್ ಪ್ರಶ್ನಿಸಿತು. ಇದಕ್ಕೆ ಜೂನ್ವರೆಗೂ ಸಮಯ ಬೇಕಾಗಬಹುದು ಎಂದು ಆಯೋಗ ಉತ್ತರಿಸಿತು. ಸುಪ್ರೀಂಕೋರ್ಟ್ ಜೂನ್.30ರೊಳಗೆ ಜಿಬಿಎ ಚುನಾವಣೆ ನಡೆಸಲು ನಿರ್ದೇಶನ ನೀಡಿತು. ಇದರ ಜೊತೆಗೆ ರಾಜ್ಯ ಸರ್ಕಾರಕ್ಕೆ ಮತ್ತೆ ಸಮಯ ಕೇಳದಂತೆ ಎಚ್ಚರಿಕೆ ನೀಡಿತು.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…