ಹಾಸನ: ಜೆಡಿಎಸ್ ಕಾರ್ಯಕರ್ತನ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಜೆಡಿಎಸ್ ಎಂಎಲ್ಸಿ ಡಾ.ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಸೂರಜ್ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.
ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವವರು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸೂರಜ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಸಂತ್ರಸ್ತನ ಮೇಲೆ ಶಿವಕುಮಾರ್ ದೂರು ಕೊಟ್ಟಿದ್ದರು.
ಹಣಕ್ಕಾಗಿ ಬೇಡಿಕೆ ಇಟ್ಟಿದ್ದ, ಹಣ ಕೊಡದ ಕಾರಣ ಸೂರಜ್ ರೇವಣ್ಣ ವಿರುದ್ಧ ಸಂತ್ರಸ್ತ ಸುಳ್ಳು ಆರೋಪ ಮಾಡುತ್ತಿದ್ದಾನೆ ಎಂದು ಶಿವಕುಮಾರ್ ದೂರು ಕೊಟ್ಟಿದ್ದರು. ಈಗ ಅದೇ ಶಿವಕುಮಾರ್, ಸೂರಜ್ ರೇವಣ್ಣ ವಿರುದ್ಧವೇ ದೂರು ಕೊಟ್ಟಿದ್ದು, ಪ್ರಕರಣ ಮತ್ತಷ್ಟು ತಿರುವು ಪಡೆದುಕೊಂಡಿದೆ.
ಸೂರಜ್ ರೇವಣ್ಣ ನನ್ನನ್ನು ಬೆದರಿಸಿ ಸಂತ್ರಸ್ತನ ವಿರುದ್ಧ ದೂರು ಕೊಡಿಸಲಾಗಿತ್ತು ಎಂದು ಶಿವಕುಮಾರ್ ಆರೋಪಿಸಿದ್ದಾರೆ. ಅಲ್ಲದೇ ಸೂರಜ್ ರೇವಣ್ಣ ನನ್ನ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಶಿವಕುಮಾರ್ ಹೇಳಿಕೆಗಳನ್ನೆಲ್ಲಾ ಪೊಲೀಸರು ದಾಖಲಿಸಿಕೊಂಡಿದ್ದು, ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…