ಹಾಸನ: ಜೆಡಿಎಸ್ ಕಾರ್ಯಕರ್ತನ ಮೇಲೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಜೆಡಿಎಸ್ ಎಂಎಲ್ಸಿ ಡಾ.ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಸೂರಜ್ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.
ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬುವವರು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸೂರಜ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಸಂತ್ರಸ್ತನ ಮೇಲೆ ಶಿವಕುಮಾರ್ ದೂರು ಕೊಟ್ಟಿದ್ದರು.
ಹಣಕ್ಕಾಗಿ ಬೇಡಿಕೆ ಇಟ್ಟಿದ್ದ, ಹಣ ಕೊಡದ ಕಾರಣ ಸೂರಜ್ ರೇವಣ್ಣ ವಿರುದ್ಧ ಸಂತ್ರಸ್ತ ಸುಳ್ಳು ಆರೋಪ ಮಾಡುತ್ತಿದ್ದಾನೆ ಎಂದು ಶಿವಕುಮಾರ್ ದೂರು ಕೊಟ್ಟಿದ್ದರು. ಈಗ ಅದೇ ಶಿವಕುಮಾರ್, ಸೂರಜ್ ರೇವಣ್ಣ ವಿರುದ್ಧವೇ ದೂರು ಕೊಟ್ಟಿದ್ದು, ಪ್ರಕರಣ ಮತ್ತಷ್ಟು ತಿರುವು ಪಡೆದುಕೊಂಡಿದೆ.
ಸೂರಜ್ ರೇವಣ್ಣ ನನ್ನನ್ನು ಬೆದರಿಸಿ ಸಂತ್ರಸ್ತನ ವಿರುದ್ಧ ದೂರು ಕೊಡಿಸಲಾಗಿತ್ತು ಎಂದು ಶಿವಕುಮಾರ್ ಆರೋಪಿಸಿದ್ದಾರೆ. ಅಲ್ಲದೇ ಸೂರಜ್ ರೇವಣ್ಣ ನನ್ನ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಶಿವಕುಮಾರ್ ಹೇಳಿಕೆಗಳನ್ನೆಲ್ಲಾ ಪೊಲೀಸರು ದಾಖಲಿಸಿಕೊಂಡಿದ್ದು, ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ.
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…
ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…