ಬೆಂಗಳೂರು: ಜೆಡಿಎಸ್ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಎಂಎಲ್ಸಿ ಡಾ.ಸೂರಜ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ನಾಳೆ ಸಿಐಡಿ ಅಧಿಕಾರಿಗಳು ಅರ್ಜಿ ಹಾಕುತ್ತಾರೆ ಎಂದು ಸೂರಜ್ ಪರ ವಕೀಲ ನಿಖಿಲ್ ಕಾಮತ್ ಹೇಳಿದ್ದಾರೆ.
ಇಂದು ಹಾಸನದ ಹಿಮ್ಸ್ನಲ್ಲಿ ಮೆಡಿಕಲ್ ಟೆಸ್ಟ್ಗೆ ಒಳಪಡಿಸಿದ ನಂತರ ಸೂರಜ್ ರೇವಣ್ಣನನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಸೂರಜ್ ರೇವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಕಾಮತ್ ಅವರು ಸೂರಜ್ ರೇವಣ್ಣರನ್ನು ಜಡ್ಜ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು, ಕೇಸ್ ಫೈಲ್ ಇನ್ನೂ ಕೈ ಸೇರಿಲ್ಲ. ನಾಳೆ ಸಿಐಡಿ ಅಧಿಕಾರಿಗಳು ಸೂರಜ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ಓಪನ್ ಕೋರ್ಟ್ಗೆ ಅರ್ಜಿ ಹಾಕುತ್ತಾರೆ ಎಂದು ಪ್ರಕರಣದ ಮಾಹಿತಿ ನೀಡಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…