ಬೆಂಗಳೂರು: ಜೆಡಿಎಸ್ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಎಂಎಲ್ಸಿ ಡಾ.ಸೂರಜ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ನಾಳೆ ಸಿಐಡಿ ಅಧಿಕಾರಿಗಳು ಅರ್ಜಿ ಹಾಕುತ್ತಾರೆ ಎಂದು ಸೂರಜ್ ಪರ ವಕೀಲ ನಿಖಿಲ್ ಕಾಮತ್ ಹೇಳಿದ್ದಾರೆ.
ಇಂದು ಹಾಸನದ ಹಿಮ್ಸ್ನಲ್ಲಿ ಮೆಡಿಕಲ್ ಟೆಸ್ಟ್ಗೆ ಒಳಪಡಿಸಿದ ನಂತರ ಸೂರಜ್ ರೇವಣ್ಣನನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಸೂರಜ್ ರೇವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಕಾಮತ್ ಅವರು ಸೂರಜ್ ರೇವಣ್ಣರನ್ನು ಜಡ್ಜ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು, ಕೇಸ್ ಫೈಲ್ ಇನ್ನೂ ಕೈ ಸೇರಿಲ್ಲ. ನಾಳೆ ಸಿಐಡಿ ಅಧಿಕಾರಿಗಳು ಸೂರಜ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ಓಪನ್ ಕೋರ್ಟ್ಗೆ ಅರ್ಜಿ ಹಾಕುತ್ತಾರೆ ಎಂದು ಪ್ರಕರಣದ ಮಾಹಿತಿ ನೀಡಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…