Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಸೂರಜ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ ಎಂದ ಹೆಚ್‌.ಡಿ. ರೇವಣ್ಣ

ಬೆಂಗಳೂರು: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿರುವ ವಿಚಾರವಾಗಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಾತನಾಡಿದ್ದು, ಸಿಐಡಿಯವರು ತನಿಖೆ ನಡೆಸಲಿ ಬಿಡಿ ಯಾರು ಬೇಡ ಅಂದಿದ್ದು. ನನಗೆ ದೇವರು, ನ್ಯಾಯಾಂಗದ ವ್ಯವಸ್ಥೆಯ ಮೇಲೆ ನಂಬಿಕೆ ಇದೆ ಎಂದು ಪ್ರತಿಕ್ರಿಯಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುವುದು ನನಗೆ ಗೊತ್ತಿದೆ. ಈ ರೀತಿಯ ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ. ಷಡ್ಯಂತ್ರ ಮಾಡುತ್ತಿರುವವರು ಯಾರು ಎನ್ನುವುದನ್ನು ಈಗ ಹೇಳುವುದಿಲ್ಲ. ಎಲ್ಲವನ್ನೂ ನಾವು ಎದುರಿಸುತ್ತೇವೆ. ಈ ಪ್ರಕರಣದಲ್ಲಿ ಏನೇನು ನಡೆದಿದೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ. ಕಾಲ ಬಂದಾಗ ಎಲ್ಲದರ ಬಗ್ಗೆ ಹೇಳುತ್ತೇನೆ, ಆ ಸಮಯ ಬರಲಿ. ನಮ್ಮ ಕಡೆಯವರು ದೂರು ಕೊಡಲು ಹೋಗಿದ್ದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

Tags:
error: Content is protected !!