ರಾಜ್ಯ

ಸೂರಜ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ ಎಂದ ಹೆಚ್‌.ಡಿ. ರೇವಣ್ಣ

ಬೆಂಗಳೂರು: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿರುವ ವಿಚಾರವಾಗಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಾತನಾಡಿದ್ದು, ಸಿಐಡಿಯವರು ತನಿಖೆ ನಡೆಸಲಿ ಬಿಡಿ ಯಾರು ಬೇಡ ಅಂದಿದ್ದು. ನನಗೆ ದೇವರು, ನ್ಯಾಯಾಂಗದ ವ್ಯವಸ್ಥೆಯ ಮೇಲೆ ನಂಬಿಕೆ ಇದೆ ಎಂದು ಪ್ರತಿಕ್ರಿಯಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುವುದು ನನಗೆ ಗೊತ್ತಿದೆ. ಈ ರೀತಿಯ ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ. ಷಡ್ಯಂತ್ರ ಮಾಡುತ್ತಿರುವವರು ಯಾರು ಎನ್ನುವುದನ್ನು ಈಗ ಹೇಳುವುದಿಲ್ಲ. ಎಲ್ಲವನ್ನೂ ನಾವು ಎದುರಿಸುತ್ತೇವೆ. ಈ ಪ್ರಕರಣದಲ್ಲಿ ಏನೇನು ನಡೆದಿದೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ. ಕಾಲ ಬಂದಾಗ ಎಲ್ಲದರ ಬಗ್ಗೆ ಹೇಳುತ್ತೇನೆ, ಆ ಸಮಯ ಬರಲಿ. ನಮ್ಮ ಕಡೆಯವರು ದೂರು ಕೊಡಲು ಹೋಗಿದ್ದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

andolana

Recent Posts

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

6 mins ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

24 mins ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

37 mins ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

2 hours ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

2 hours ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

2 hours ago