ಕಲಬುರುಗಿ: ಸೂರಜ್ ರೇವಣ್ಣ ಪ್ರಕರಣ ಇದೆಲ್ಲವೂ ವಿಚಿತ್ರ, ವಿಕೃತವಾದ ಅಸಹ್ಯ ಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಕಲಬುರುಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಜ್ವಲ್, ಸೂರಜ್, ಯಡಿಯುರಪ್ಪ ಯಾರದ್ರೂ ಆಗಿರಬಹುದು, ಏನು ನಡೆಯುತ್ತದೆ ಅಂತ ಗೊತ್ತಾಗುತ್ತಿಲ್ಲ. ಆಶ್ಚರ್ಯ ಏನು ಅಂದ್ರೆ, ಯಾರು ಈ ಪ್ರಕರಣದಲ್ಲಿದ್ದಾರೆ ಅವರಿಗೆ ಏನು ಅನ್ನಿಸುತ್ತಿಲ್ಲ. ಎಲ್ಲರೂ ಬೇರೆಯವರ ರಾಜೀನಾಮೆ ಕೇಳುತ್ತಿದ್ದಾರೆ. ಮೊದಲು ಅವರು ಆತ್ಮಾವಲೋಕನಾ ಮಾಡಿಕೊಳ್ಳುತ್ತಿಲ್ಲ. ಅವರದ್ದು ದೊಡ್ಡ ಮನೆ ಎಲ್ಲರೂ ಅಧಿಕಾರದಲ್ಲಿದ್ದಾರೆ. ಅವರ ಮೇಲೆ ಏನು ಜವಾಬ್ದಾರಿ ಇದೆ, ಸಮಾಜಕ್ಕೆ ಏನಂತ ಮೆಸೇಜ್ ಕಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಅಲ್ಲದೆ ಕುಮಾರಸ್ವಾಮಿ ರಾಜೀನಾಮೆ ಅವರ ವಿವೇಚನೆಗೆ ಬಿಟ್ಟ ವಿಚಾರ. ಲಕ್ಷಾಂತರ ಜನ ಕಾರ್ಯಕರ್ತರು ಇದ್ದಾರೆ. ಅವರನ್ನು ನಂಬಿಕೊಂಡು ಎನ್.ಡಿ.ಎ ನಡೆಯುತ್ತಿದೆ. ಕುಮಾರಸ್ವಾಮಿ, ದೇವೇಗೌಡರು, ರೇವಣ್ಣರ ಬಗ್ಗೆ ಮಾತನಾಡಲು ಹೋಗಲ್ಲ.
ಅವರ ಸ್ವಂತ ವಿವೇಚನೆ, ಅವರೇ ಆತ್ಮಾವಲೋಕನೆ ಮಾಡಿಕೊಂಡು ಏನು ಮಾಡುತ್ತಾರೆ ಅವರಿಗೆ ಬಿಟ್ಟಿದ್ದು ಎಂದರು. ಜೊತೆಗೆ ಈ ವಿಚಾರದಲ್ಲಿ ಬಿಜೆಪಿಯವರ ಸ್ಮಶಾನ ಮೌನಾ ಯಾಕೆ ಗೊತ್ತಾಗುತ್ತಿಲ್ಲ. ಮಿಕ್ಕಿದ ಟೈಮಲ್ಲಿ ಭೇಟಿ ಪಡಾವೋ ಬಚಾವೋ ಅಂತ ಮಾತಾಡುತ್ತಾರೆ. ಪ್ರಧಾನಿಯವರು ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಸಂವಿಧಾನಕ್ಕೆ ತಲೆಬಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ಆದರೆ ಸಂವಿಧಾನ ಕಾನೂನು ಉಲ್ಲಂಘನೆ ಆದಾಗ ಮಾತಾಡಲ್ಲ ಎಂದು ಮೋದಿ ವಿರುದ್ಧವೂ ಕಿಡಿಕಾರಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…