ರಾಜ್ಯ

ಸೂರಜ್ ರೇವಣ್ಣ ಪ್ರಕರಣ: ಇದೆಲ್ಲವೂ ವಿಚಿತ್ರ, ವಿಕೃತವಾದ, ಅಸಹ್ಯ ಪಡುವ ಪ್ರಕರಣಗಳು: ಪ್ರಿಯಾಂಕ್ ಖರ್ಗೆ

ಕಲಬುರುಗಿ: ಸೂರಜ್ ರೇವಣ್ಣ ಪ್ರಕರಣ ಇದೆಲ್ಲವೂ ವಿಚಿತ್ರ, ವಿಕೃತವಾದ ಅಸಹ್ಯ ಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಕಲಬುರುಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಜ್ವಲ್, ಸೂರಜ್, ಯಡಿಯುರಪ್ಪ ಯಾರದ್ರೂ ಆಗಿರಬಹುದು, ಏನು ನಡೆಯುತ್ತದೆ ಅಂತ ಗೊತ್ತಾಗುತ್ತಿಲ್ಲ. ಆಶ್ಚರ್ಯ ಏನು ಅಂದ್ರೆ, ಯಾರು ಈ ಪ್ರಕರಣದಲ್ಲಿದ್ದಾರೆ ಅವರಿಗೆ ಏನು ಅನ್ನಿಸುತ್ತಿಲ್ಲ. ಎಲ್ಲರೂ ಬೇರೆಯವರ ರಾಜೀನಾಮೆ ಕೇಳುತ್ತಿದ್ದಾರೆ. ಮೊದಲು ಅವರು ಆತ್ಮಾವಲೋಕನಾ ಮಾಡಿಕೊಳ್ಳುತ್ತಿಲ್ಲ. ಅವರದ್ದು ದೊಡ್ಡ ಮನೆ ಎಲ್ಲರೂ ಅಧಿಕಾರದಲ್ಲಿದ್ದಾರೆ. ಅವರ ಮೇಲೆ ಏನು ಜವಾಬ್ದಾರಿ ಇದೆ, ಸಮಾಜಕ್ಕೆ ಏನಂತ ಮೆಸೇಜ್ ಕಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಅಲ್ಲದೆ ಕುಮಾರಸ್ವಾಮಿ ರಾಜೀನಾಮೆ ಅವರ ವಿವೇಚನೆಗೆ ಬಿಟ್ಟ ವಿಚಾರ. ಲಕ್ಷಾಂತರ ಜನ ಕಾರ್ಯಕರ್ತರು ಇದ್ದಾರೆ. ಅವರನ್ನು ನಂಬಿಕೊಂಡು ಎನ್.ಡಿ.ಎ ನಡೆಯುತ್ತಿದೆ. ಕುಮಾರಸ್ವಾಮಿ, ದೇವೇಗೌಡರು, ರೇವಣ್ಣರ ಬಗ್ಗೆ ಮಾತನಾಡಲು ಹೋಗಲ್ಲ.

ಅವರ ಸ್ವಂತ ವಿವೇಚನೆ, ಅವರೇ ಆತ್ಮಾವಲೋಕನೆ ಮಾಡಿಕೊಂಡು ಏನು ಮಾಡುತ್ತಾರೆ ಅವರಿಗೆ ಬಿಟ್ಟಿದ್ದು ಎಂದರು. ಜೊತೆಗೆ ಈ ವಿಚಾರದಲ್ಲಿ ಬಿಜೆಪಿಯವರ ಸ್ಮಶಾನ ಮೌನಾ ಯಾಕೆ ಗೊತ್ತಾಗುತ್ತಿಲ್ಲ. ಮಿಕ್ಕಿದ ಟೈಮಲ್ಲಿ ಭೇಟಿ ಪಡಾವೋ ಬಚಾವೋ ಅಂತ ಮಾತಾಡುತ್ತಾರೆ. ಪ್ರಧಾನಿಯವರು ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಸಂವಿಧಾನಕ್ಕೆ ತಲೆಬಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ಆದರೆ ಸಂವಿಧಾನ ಕಾನೂನು ಉಲ್ಲಂಘನೆ ಆದಾಗ ಮಾತಾಡಲ್ಲ ಎಂದು ಮೋದಿ ವಿರುದ್ಧವೂ ಕಿಡಿಕಾರಿದರು.

andolana

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago