ಕಲಬುರುಗಿ: ಸೂರಜ್ ರೇವಣ್ಣ ಪ್ರಕರಣ ಇದೆಲ್ಲವೂ ವಿಚಿತ್ರ, ವಿಕೃತವಾದ ಅಸಹ್ಯ ಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಕಲಬುರುಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಜ್ವಲ್, ಸೂರಜ್, ಯಡಿಯುರಪ್ಪ ಯಾರದ್ರೂ ಆಗಿರಬಹುದು, ಏನು ನಡೆಯುತ್ತದೆ ಅಂತ ಗೊತ್ತಾಗುತ್ತಿಲ್ಲ. ಆಶ್ಚರ್ಯ ಏನು ಅಂದ್ರೆ, ಯಾರು ಈ ಪ್ರಕರಣದಲ್ಲಿದ್ದಾರೆ ಅವರಿಗೆ ಏನು ಅನ್ನಿಸುತ್ತಿಲ್ಲ. ಎಲ್ಲರೂ ಬೇರೆಯವರ ರಾಜೀನಾಮೆ ಕೇಳುತ್ತಿದ್ದಾರೆ. ಮೊದಲು ಅವರು ಆತ್ಮಾವಲೋಕನಾ ಮಾಡಿಕೊಳ್ಳುತ್ತಿಲ್ಲ. ಅವರದ್ದು ದೊಡ್ಡ ಮನೆ ಎಲ್ಲರೂ ಅಧಿಕಾರದಲ್ಲಿದ್ದಾರೆ. ಅವರ ಮೇಲೆ ಏನು ಜವಾಬ್ದಾರಿ ಇದೆ, ಸಮಾಜಕ್ಕೆ ಏನಂತ ಮೆಸೇಜ್ ಕಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಅಲ್ಲದೆ ಕುಮಾರಸ್ವಾಮಿ ರಾಜೀನಾಮೆ ಅವರ ವಿವೇಚನೆಗೆ ಬಿಟ್ಟ ವಿಚಾರ. ಲಕ್ಷಾಂತರ ಜನ ಕಾರ್ಯಕರ್ತರು ಇದ್ದಾರೆ. ಅವರನ್ನು ನಂಬಿಕೊಂಡು ಎನ್.ಡಿ.ಎ ನಡೆಯುತ್ತಿದೆ. ಕುಮಾರಸ್ವಾಮಿ, ದೇವೇಗೌಡರು, ರೇವಣ್ಣರ ಬಗ್ಗೆ ಮಾತನಾಡಲು ಹೋಗಲ್ಲ.
ಅವರ ಸ್ವಂತ ವಿವೇಚನೆ, ಅವರೇ ಆತ್ಮಾವಲೋಕನೆ ಮಾಡಿಕೊಂಡು ಏನು ಮಾಡುತ್ತಾರೆ ಅವರಿಗೆ ಬಿಟ್ಟಿದ್ದು ಎಂದರು. ಜೊತೆಗೆ ಈ ವಿಚಾರದಲ್ಲಿ ಬಿಜೆಪಿಯವರ ಸ್ಮಶಾನ ಮೌನಾ ಯಾಕೆ ಗೊತ್ತಾಗುತ್ತಿಲ್ಲ. ಮಿಕ್ಕಿದ ಟೈಮಲ್ಲಿ ಭೇಟಿ ಪಡಾವೋ ಬಚಾವೋ ಅಂತ ಮಾತಾಡುತ್ತಾರೆ. ಪ್ರಧಾನಿಯವರು ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಸಂವಿಧಾನಕ್ಕೆ ತಲೆಬಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ಆದರೆ ಸಂವಿಧಾನ ಕಾನೂನು ಉಲ್ಲಂಘನೆ ಆದಾಗ ಮಾತಾಡಲ್ಲ ಎಂದು ಮೋದಿ ವಿರುದ್ಧವೂ ಕಿಡಿಕಾರಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…