ರಾಜ್ಯ

ಸೂರಜ್ ರೇವಣ್ಣ ಪ್ರಕರಣ: ಇದೆಲ್ಲವೂ ವಿಚಿತ್ರ, ವಿಕೃತವಾದ, ಅಸಹ್ಯ ಪಡುವ ಪ್ರಕರಣಗಳು: ಪ್ರಿಯಾಂಕ್ ಖರ್ಗೆ

ಕಲಬುರುಗಿ: ಸೂರಜ್ ರೇವಣ್ಣ ಪ್ರಕರಣ ಇದೆಲ್ಲವೂ ವಿಚಿತ್ರ, ವಿಕೃತವಾದ ಅಸಹ್ಯ ಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಕಲಬುರುಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಜ್ವಲ್, ಸೂರಜ್, ಯಡಿಯುರಪ್ಪ ಯಾರದ್ರೂ ಆಗಿರಬಹುದು, ಏನು ನಡೆಯುತ್ತದೆ ಅಂತ ಗೊತ್ತಾಗುತ್ತಿಲ್ಲ. ಆಶ್ಚರ್ಯ ಏನು ಅಂದ್ರೆ, ಯಾರು ಈ ಪ್ರಕರಣದಲ್ಲಿದ್ದಾರೆ ಅವರಿಗೆ ಏನು ಅನ್ನಿಸುತ್ತಿಲ್ಲ. ಎಲ್ಲರೂ ಬೇರೆಯವರ ರಾಜೀನಾಮೆ ಕೇಳುತ್ತಿದ್ದಾರೆ. ಮೊದಲು ಅವರು ಆತ್ಮಾವಲೋಕನಾ ಮಾಡಿಕೊಳ್ಳುತ್ತಿಲ್ಲ. ಅವರದ್ದು ದೊಡ್ಡ ಮನೆ ಎಲ್ಲರೂ ಅಧಿಕಾರದಲ್ಲಿದ್ದಾರೆ. ಅವರ ಮೇಲೆ ಏನು ಜವಾಬ್ದಾರಿ ಇದೆ, ಸಮಾಜಕ್ಕೆ ಏನಂತ ಮೆಸೇಜ್ ಕಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಅಲ್ಲದೆ ಕುಮಾರಸ್ವಾಮಿ ರಾಜೀನಾಮೆ ಅವರ ವಿವೇಚನೆಗೆ ಬಿಟ್ಟ ವಿಚಾರ. ಲಕ್ಷಾಂತರ ಜನ ಕಾರ್ಯಕರ್ತರು ಇದ್ದಾರೆ. ಅವರನ್ನು ನಂಬಿಕೊಂಡು ಎನ್.ಡಿ.ಎ ನಡೆಯುತ್ತಿದೆ. ಕುಮಾರಸ್ವಾಮಿ, ದೇವೇಗೌಡರು, ರೇವಣ್ಣರ ಬಗ್ಗೆ ಮಾತನಾಡಲು ಹೋಗಲ್ಲ.

ಅವರ ಸ್ವಂತ ವಿವೇಚನೆ, ಅವರೇ ಆತ್ಮಾವಲೋಕನೆ ಮಾಡಿಕೊಂಡು ಏನು ಮಾಡುತ್ತಾರೆ ಅವರಿಗೆ ಬಿಟ್ಟಿದ್ದು ಎಂದರು. ಜೊತೆಗೆ ಈ ವಿಚಾರದಲ್ಲಿ ಬಿಜೆಪಿಯವರ ಸ್ಮಶಾನ ಮೌನಾ ಯಾಕೆ ಗೊತ್ತಾಗುತ್ತಿಲ್ಲ. ಮಿಕ್ಕಿದ ಟೈಮಲ್ಲಿ ಭೇಟಿ ಪಡಾವೋ ಬಚಾವೋ ಅಂತ ಮಾತಾಡುತ್ತಾರೆ. ಪ್ರಧಾನಿಯವರು ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಸಂವಿಧಾನಕ್ಕೆ ತಲೆಬಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ಆದರೆ ಸಂವಿಧಾನ ಕಾನೂನು ಉಲ್ಲಂಘನೆ ಆದಾಗ ಮಾತಾಡಲ್ಲ ಎಂದು ಮೋದಿ ವಿರುದ್ಧವೂ ಕಿಡಿಕಾರಿದರು.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago