Mysore
24
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

ಸೂರಜ್ ವಿರುದ್ದ ಸಲಿಂಗ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡ್ತೀವಿ: ಜಿ.ಪರಮೇಶ್ವರ್

ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವರು, ನಿನ್ನೆವರೆಗೂ ದೂರು ಬಂದಿರಲಿಲ್ಲ ಈಗ ಬಂದಿದೆ ಎಫ್.ಐ.ಆರ್ ಕೂಡ ಆಗಿದೆ. ಈ ಪ್ರಕರಣವನ್ನೂ ಸಿಐಡಿ ತನಿಖೆಗೆ ಕೊಡ್ತೀವಿ. ಈ ರೀತಿಯ ಪ್ರಕರಣಗಳನ್ನು ಸಿಐಡಿಗೆ ಕೊಡಬೇಕಾಗುತ್ತೆ.

ನನಗೇನು ಗೊತ್ತೋ ಅಷ್ಟನ್ನೇ ನಾನು ಹೇಳ್ತೀನಿ. ಏನ್ ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸರು ತೆಗೆದುಕೊಳ್ಳುತ್ತಾರೆ. ಅದನ್ನ ಬಿಟ್ಟು ರಾಜಕೀಯ ಪ್ರೇರಿತ ಅನ್ನೋದು ಏನೂ ನನಗೆ ಗೊತ್ತಿಲ್ಲ ಎಂದು ಹೇಳಿದರು.

Tags:
error: Content is protected !!