ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಜೆಡಿಎಸ್ MLC ಸೂರಜ್ ರೇವಣ್ಣಗೆ 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಕೇಸ್ ಅನ್ನು ಸಿಐಡಿಗೆ ವಹಿಸಿ ಆದೇಶ ಮಾಡಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಭಾನುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು.
ಇಂದು ಸೂರಜ್ ರೇವಣ್ಣರನ್ನ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿ 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರಾದ ಶಿವಕುಮಾರ್ ಅವರು 8 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಅಲ್ಲದೆ ಜುಲೈ 1 ಸಂಜೆ 4 ಗಂಟೆಗೆ ಸೂರಜ್ ರೇವಣ್ಣರನ್ನ ಕೋರ್ಟ್ಗೆ ಹಾಜರುಪಡಿಸುವಂತೆ ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.
ಇನ್ನು ಪ್ರಕರಣದ ತನಿಖಾಧಿಕಾರಿಗಳಾಗಿ ಸಿಐಡಿ ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್, ಇನ್ಸ್ಪೆಕ್ಟರ್ ನರೇಂದ್ರ ಬಾಬು ನೇಮಕಗೊಂಡಿದ್ದಾರೆ.





