ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಜೆಡಿಎಸ್ MLC ಸೂರಜ್ ರೇವಣ್ಣಗೆ 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಕೇಸ್ ಅನ್ನು ಸಿಐಡಿಗೆ ವಹಿಸಿ ಆದೇಶ ಮಾಡಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಭಾನುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು.
ಇಂದು ಸೂರಜ್ ರೇವಣ್ಣರನ್ನ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿ 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರಾದ ಶಿವಕುಮಾರ್ ಅವರು 8 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಅಲ್ಲದೆ ಜುಲೈ 1 ಸಂಜೆ 4 ಗಂಟೆಗೆ ಸೂರಜ್ ರೇವಣ್ಣರನ್ನ ಕೋರ್ಟ್ಗೆ ಹಾಜರುಪಡಿಸುವಂತೆ ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.
ಇನ್ನು ಪ್ರಕರಣದ ತನಿಖಾಧಿಕಾರಿಗಳಾಗಿ ಸಿಐಡಿ ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್, ಇನ್ಸ್ಪೆಕ್ಟರ್ ನರೇಂದ್ರ ಬಾಬು ನೇಮಕಗೊಂಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…