ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಜೆಡಿಎಸ್ MLC ಸೂರಜ್ ರೇವಣ್ಣಗೆ 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಕೇಸ್ ಅನ್ನು ಸಿಐಡಿಗೆ ವಹಿಸಿ ಆದೇಶ ಮಾಡಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಭಾನುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು.
ಇಂದು ಸೂರಜ್ ರೇವಣ್ಣರನ್ನ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿ 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರಾದ ಶಿವಕುಮಾರ್ ಅವರು 8 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಅಲ್ಲದೆ ಜುಲೈ 1 ಸಂಜೆ 4 ಗಂಟೆಗೆ ಸೂರಜ್ ರೇವಣ್ಣರನ್ನ ಕೋರ್ಟ್ಗೆ ಹಾಜರುಪಡಿಸುವಂತೆ ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.
ಇನ್ನು ಪ್ರಕರಣದ ತನಿಖಾಧಿಕಾರಿಗಳಾಗಿ ಸಿಐಡಿ ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್, ಇನ್ಸ್ಪೆಕ್ಟರ್ ನರೇಂದ್ರ ಬಾಬು ನೇಮಕಗೊಂಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…