ಹಾಸನ : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿರುವ ಜೆಡಿಎಸ್ MLC ಸೂರಜ್ ರೇವಣ್ಣಗೆ 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಕೇಸ್ ಅನ್ನು ಸಿಐಡಿಗೆ ವಹಿಸಿ ಆದೇಶ ಮಾಡಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಭಾನುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು.
ಇಂದು ಸೂರಜ್ ರೇವಣ್ಣರನ್ನ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿ 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಧೀಶರಾದ ಶಿವಕುಮಾರ್ ಅವರು 8 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಅಲ್ಲದೆ ಜುಲೈ 1 ಸಂಜೆ 4 ಗಂಟೆಗೆ ಸೂರಜ್ ರೇವಣ್ಣರನ್ನ ಕೋರ್ಟ್ಗೆ ಹಾಜರುಪಡಿಸುವಂತೆ ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.
ಇನ್ನು ಪ್ರಕರಣದ ತನಿಖಾಧಿಕಾರಿಗಳಾಗಿ ಸಿಐಡಿ ಎಸ್ಪಿ ವೆಂಕಟೇಶ್, ಡಿವೈಎಸ್ಪಿ ಉಮೇಶ್, ಇನ್ಸ್ಪೆಕ್ಟರ್ ನರೇಂದ್ರ ಬಾಬು ನೇಮಕಗೊಂಡಿದ್ದಾರೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…