Categories: ರಾಜ್ಯ

ಶಾಸಕ ಜಿ.ಟಿ.ದೇವೇಗೌಡರಿಗೆ ಜೆಡಿಎಸ್‌ ಮೇಲೆ ಅಸಮಾಧಾನ ಇರೋದು ಸತ್ಯ: ಸುರೇಶ್‌ ಬಾಬು

ಬೆಂಗಳೂರು: ಶಾಸಕ ಜಿ.ಟಿ.ದೇವೇಗೌಡರಿಗೆ ಜೆಡಿಎಸ್‌ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ. ಒಂದು ವೇಳೆ ಜಿಟಿಡಿ ಅವರೊಂದಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರೆ ಎಲ್ಲವೂ ಸರಿಯಾಗಲಿದೆ ಎಂದು ಜೆಡಿಎಸ್‌ ಶಾಸಕಾಂಗ ನಾಯಕ ಸುರೇಶ್‌ ಬಾಬು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ನ.27) ಜಿ.ಟಿ.ದೇವೇಗೌಡ ಅವರು ಜೆಡಿಎಸ್‌ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ.ದೇವೇಗೌಡರಿಗೆ ಪಕ್ಷದಲ್ಲಿರುವ ಸ್ಥಾನಮಾನದ ಕುರಿತು ಅಸಮಾಧಾನವಿರುವುದು ಸತ್ಯ. ಅಲ್ಲದೇ ಕೇಂದ್ರ ಸಚಿವ  ಎಚ್‌.ಡಿ.ಕುಮಾರಸ್ವಾಮಿಯವರ ಬಗ್ಗೆಯೂ ಅಸಮಾಧಾನವಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿ ಪಡಿಸಲು ಪಕ್ಷದ ವರಿಷ್ಠರೊಂದಿಗೆ ಹಾಗೂ ನಾಯಕರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದಿದ್ದಾರೆ.

ಜಿಟಿಡಿ ಅವರಿಗೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಪರ ಪ್ರಚಾರ ಮಾಡಲು ಸ್ವತಃ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರೇ ಕರೆ ಮಾಡಿ ಹೇಳಿದ್ದರು. ಆದರೆ ಆ ಸಂದರ್ಭದಲ್ಲಿ ಅವರು ಯಾಕೋ ಬರಲಿಲ್ಲ. ನಾನು ಇಂದು ಸಹ ಸುದ್ದಿಗೋಷ್ಠಿಗೆ ಬರಲು ಹೇಳಿದ್ದೆ. ಹೀಗಿದ್ದರೂ ಅವರು ಬಂದಿಲ್ಲ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago