ಬೆಂಗಳೂರು : ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಯೋಜನೆ ಕುರಿತು ಮಂಗಳವಾರ ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಹೊರತುಪಡಿಸಿ ಎಲ್ಲಾ ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಸರ್ಕಾರ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಿದ್ದರೂ ಅದಕ್ಕೆ ಪೂರಕವಾಗಿ ಕಾರ್ಯಯೋಜನೆ ಸಿದ್ಧಪಡಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣ, ರಸ್ತೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಎರಡನೇ ಹಂತದಲ್ಲಿ ಎಲ್ಲಾ 11 ಮಹಾನಗರ ಪಾಲಿಕೆಗಳಿಗೆ ಒಟ್ಟು 1730 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
ಮೈಸೂರು, ವಿಜಯಪುರ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಮಂಗಳೂರು ಮತ್ತು ರಾಯಚೂರು ಮಹಾ ನಗರಪಾಲಿಕೆಗಳು ತಮಗೆ ನಿಗದಿಪಡಿಸಲಾದ ಅನುದಾನಕ್ಕೆ ಪೂರಕವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಯೋಜನೆಗಳನ್ನು ಸಿದ್ಧಪಡಿಸಿವೆ. ಆದರೆ, ಕಲಬುರಗಿ, ತುಮಕೂರು, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳು ಇದುವರೆಗೂ ಕಾರ್ಯಯೋಜನೆ ವರದಿಯನ್ನು ಪೂರ್ಣಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಒಂದು ದಿನದ ಗಡುವು
ಬುಧವಾರ ಸಂಜೆಯೊಳಗೆ ಕಾರ್ಯಯೋಜನೆಯನ್ನು ಸಿದ್ಧಪಡಿಸಬೇಕು. ಈ ಗಡುವಿನೊಳಗೆ ವರದಿಯನ್ನು ಸಿದ್ಧಪಡಿಸದಿದ್ದರೆ ಅಂತಹ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯಾವ್ಯಾವ ಪಾಲಿಕೆಗಳಿಗೆ ಎಷ್ಟೆಷ್ಟು ಅನುದಾನ?
ಮೈಸೂರು ಮಹಾ ನಗರ ಪಾಲಿಕೆಗೆ 250 ಕೋಟಿ ರೂಪಾಯಿಗಳ ಅನುದಾನದ ಪೈಕಿ ಈ ಹಣದಲ್ಲಿ 6 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ವಿಜಯಪುರದಲ್ಲಿ 150 ಕೋಟಿ ರೂಪಾಯಿಗಳು, ಬಳ್ಳಾರಿಗೆ 127.5 ಕೋಟಿ ರೂಪಾಯಿ, ದಾವಣಗೆರೆಗೆ 127.5 ಕೋಟಿ ರೂಪಾಯಿ, ತುಮಕೂರಿಗೆ 175 ಕೋಟಿ ರೂಪಾಯಿ, ಶಿವಮೊಗ್ಗಕ್ಕೆ 127.5 ಕೋಟಿ, ಮಂಗಳೂರಿನಲ್ಲಿ 165 ಕೋಟಿ ರೂಪಾಯಿ, ಕಲಬುರಗಿಗೆ 127.5 ಕೋಟಿ ರೂಪಾಯಿ, ಬೆಳಗಾವಿಗೆ 127.5 ಕೋಟಿ ರೂಪಾಯಿ, ಹುಬ್ಬಳ್ಳಿ-ಧಾರವಾಡಕ್ಕೆ 152.50 ಕೋಟಿ ರೂಪಾಯಿಗಳು ಹಾಗೂ ರಾಯಚೂರು ಮಹಾನಗರ ಪಾಲಿಕೆಗೆ 200 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…