ರಾಜ್ಯ

ಅಹಿಂದ,ಶೋಷಿತ ವರ್ಗಗಳ ಶಕ್ತಿಯನ್ನು ಕಸಿಯುತ್ತಿರುವ ಕೇಂದ್ರ ಸರ್ಕಾರ: ರಣದೀಪ್‌ಸಿಂಗ್‌ ಸುರ್ಜೆವಾಲ

ಹಾಸನ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದೇಶದಲ್ಲಿ ಶೋಷಿತ, ಅಹಿಂದ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಬಲಪಡಿಸುವ ಉದ್ದೇಶದಿಂದ ಸಂವಿಧಾನವನ್ನು ರಚಿಸಿದ್ದಾರೆ. ಆದರೆ, ಇದೀಗ ಕೇಂದ್ರ ಸರ್ಕಾರ ಶೋಷಿತ ವರ್ಗಗಳ ಶಕ್ತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೆವಾಲ ಆರೋಪಿಸಿದ್ದಾರೆ.

ಈ ಕುರಿತು ಇಂದು(ಡಿ.5) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ತೆರಿಗೆಯನ್ನು ಶೇ.33 ರಿಂದ ಶೇ.22ಕ್ಕೆ ಇಳಿಕೆ ಮಾಡುವ ಮೂಲಕ ಕೋಟ್ಯಂತರ ರೂಪಾಯಿಯನ್ನು ನೀಡುತ್ತಿದೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ 58 ಸಾವಿರ ಕೋಟಿ ರೂಪಾಯಿಯನ್ನು ನೇರವಾಗಿ ಬಡವರ ಖಾತೆಗೆ ಜಮೆ ಮಾಡುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ದಾಳಿ ಮಾಡುವ ಮುಖಾಂತರ ಬಡವರ, ದುರ್ಬಲ ವರ್ಗದವರ ಶಕ್ತಿಯನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ಆಶಯಗಳಂತೆ ನಮ್ಮ ಕಾಂಗ್ರೆಸ್‌ ಸರ್ಕಾರ ದಲಿತ, ಬಡವರು, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರು ಸೇರಿದಂತೆ ಸರ್ವರ ಪರವಾಗಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಆದರೆ ಕೇಂದ್ರ ಸರ್ಕಾರ, ಉದ್ಯಮಿಗಳ 78 ಸಾವಿರ ಕೋಟಿ ರೂಪಾಯಿಗಳಷ್ಟು ಸಾಲವನ್ನು ಮನ್ನಾ ಮಾಡುತ್ತಿದ್ದು, ಕರ್ನಾಟಕ ರಾಜ್ಯದ ಪಂಚ ಗ್ಯಾರಂಟಿಗಳ ಮೊತ್ತವನ್ನು ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ, ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ವಿರೋಧ ಪಕ್ಷಗಳಾಗಲಿ ಪಂಚ ಗ್ಯಾರಂಟಿಗಳನ್ನು ತಡೆಯಲು ಸಾಧ್ಯವಿಲ್ಲ. ಗ್ಯಾರಂಟಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತೇವೆ. ಯಾರೇ ಏನೇ ಮಾಡಿದರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು ಇರುವವರೆಗೂ ಗ್ಯಾರಂಟಿಗಳನ್ನು ನಿಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

 

 

 

ಅರ್ಚನ ಎಸ್‌ ಎಸ್

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

2 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

3 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

4 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

4 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

5 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

7 hours ago