ರಾಜ್ಯ

ಅಹಿಂದ,ಶೋಷಿತ ವರ್ಗಗಳ ಶಕ್ತಿಯನ್ನು ಕಸಿಯುತ್ತಿರುವ ಕೇಂದ್ರ ಸರ್ಕಾರ: ರಣದೀಪ್‌ಸಿಂಗ್‌ ಸುರ್ಜೆವಾಲ

ಹಾಸನ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದೇಶದಲ್ಲಿ ಶೋಷಿತ, ಅಹಿಂದ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಬಲಪಡಿಸುವ ಉದ್ದೇಶದಿಂದ ಸಂವಿಧಾನವನ್ನು ರಚಿಸಿದ್ದಾರೆ. ಆದರೆ, ಇದೀಗ ಕೇಂದ್ರ ಸರ್ಕಾರ ಶೋಷಿತ ವರ್ಗಗಳ ಶಕ್ತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೆವಾಲ ಆರೋಪಿಸಿದ್ದಾರೆ.

ಈ ಕುರಿತು ಇಂದು(ಡಿ.5) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ತೆರಿಗೆಯನ್ನು ಶೇ.33 ರಿಂದ ಶೇ.22ಕ್ಕೆ ಇಳಿಕೆ ಮಾಡುವ ಮೂಲಕ ಕೋಟ್ಯಂತರ ರೂಪಾಯಿಯನ್ನು ನೀಡುತ್ತಿದೆ. ಆದರೆ ಕರ್ನಾಟಕ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ 58 ಸಾವಿರ ಕೋಟಿ ರೂಪಾಯಿಯನ್ನು ನೇರವಾಗಿ ಬಡವರ ಖಾತೆಗೆ ಜಮೆ ಮಾಡುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ದಾಳಿ ಮಾಡುವ ಮುಖಾಂತರ ಬಡವರ, ದುರ್ಬಲ ವರ್ಗದವರ ಶಕ್ತಿಯನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ಆಶಯಗಳಂತೆ ನಮ್ಮ ಕಾಂಗ್ರೆಸ್‌ ಸರ್ಕಾರ ದಲಿತ, ಬಡವರು, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರು ಸೇರಿದಂತೆ ಸರ್ವರ ಪರವಾಗಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಆದರೆ ಕೇಂದ್ರ ಸರ್ಕಾರ, ಉದ್ಯಮಿಗಳ 78 ಸಾವಿರ ಕೋಟಿ ರೂಪಾಯಿಗಳಷ್ಟು ಸಾಲವನ್ನು ಮನ್ನಾ ಮಾಡುತ್ತಿದ್ದು, ಕರ್ನಾಟಕ ರಾಜ್ಯದ ಪಂಚ ಗ್ಯಾರಂಟಿಗಳ ಮೊತ್ತವನ್ನು ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ, ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ವಿರೋಧ ಪಕ್ಷಗಳಾಗಲಿ ಪಂಚ ಗ್ಯಾರಂಟಿಗಳನ್ನು ತಡೆಯಲು ಸಾಧ್ಯವಿಲ್ಲ. ಗ್ಯಾರಂಟಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತೇವೆ. ಯಾರೇ ಏನೇ ಮಾಡಿದರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು ಇರುವವರೆಗೂ ಗ್ಯಾರಂಟಿಗಳನ್ನು ನಿಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

 

 

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago