ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕಾಂಗ್ರೆಸ್ ಶಾಸಕಾಂಗ ಸಭೆಗೂ ಮುನ್ನವೇ ಪಕ್ಷದ ಸಚಿವರಿಗೆ ಹಾಗೂ ಶಾಸಕರಿಗೆ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಶಿಸ್ತಿನ ಪಾಠ ಮಾಡಿ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು(ಜನವರಿ.10) ನಡೆದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಹಾಗೂ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರಕ್ಕಿಂತ ಪಕ್ಷ ದೊಡ್ಡದಾಗಿದೆ ಎಂದರು.
ಪಕ್ಷ ಒಗ್ಗಟ್ಟಾಗಿದ್ದಾಗ ಮಾತ್ರ ಯಾವ ರಾಜ್ಯದಲ್ಲಾದರೂ ಸರ್ಕಾರವನ್ನು ರಚಿಸಲು ಸಾಧ್ಯ. ಹೀಗಾಗಿ ಯಾವುದೇ ಕಾರಣಕ್ಕೂ ಸಚಿವರಾಗಲಿ ಅಥವಾ ಶಾಸಕರಾಗಲಿ ಪಕ್ಷಕ್ಕೆ ಹಾನಿಯಾಗುವಂತಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಸೂಚಿಸಿದರು.
ಇನ್ನೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ನಾಯಕತ್ವದ ಸಂಘರ್ಷ ಇದೆ. ಆದರೆ ಕಾಂಗ್ರೆಸ್ನಲ್ಲಿ ಯಾವುದೇ ಗುಂಪುಗಾರಿಕೆಗಳಿಲ್ಲ. ಮುಂದಿನ ದಿನಗಳಲ್ಲಿಯೂ ಗುಂಪುಗಾರಿಕೆ ಆಗುವುದು ಬೇಡ. ಸಚಿವರು ಹಾಗೂ ಶಾಸಕರು ರಾಜ್ಯದಲ್ಲಿ ನ್ಯಾಯಯುತವಾಗಿ ಆಡಳಿತ ನಡೆಸಿ ಎಂದು ಹೇಳಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…