ರಾಜ್ಯ

ಸಚಿವರು, ಶಾಸಕರಿಗೆ ಶಿಸ್ತಿನ ಪಾಠ ಮಾಡಿದ ಸುರ್ಜೇವಾಲ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಕಾಂಗ್ರೆಸ್‌ ಶಾಸಕಾಂಗ ಸಭೆಗೂ ಮುನ್ನವೇ ಪಕ್ಷದ ಸಚಿವರಿಗೆ ಹಾಗೂ ಶಾಸಕರಿಗೆ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಶಿಸ್ತಿನ ಪಾಠ ಮಾಡಿ ಎಚ್ಚರಿಕೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು(ಜನವರಿ.10) ನಡೆದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಹಾಗೂ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರಕ್ಕಿಂತ ಪಕ್ಷ ದೊಡ್ಡದಾಗಿದೆ ಎಂದರು.

ಪಕ್ಷ ಒಗ್ಗಟ್ಟಾಗಿದ್ದಾಗ ಮಾತ್ರ ಯಾವ ರಾಜ್ಯದಲ್ಲಾದರೂ ಸರ್ಕಾರವನ್ನು ರಚಿಸಲು ಸಾಧ್ಯ. ಹೀಗಾಗಿ ಯಾವುದೇ ಕಾರಣಕ್ಕೂ ಸಚಿವರಾಗಲಿ ಅಥವಾ ಶಾಸಕರಾಗಲಿ ಪಕ್ಷಕ್ಕೆ ಹಾನಿಯಾಗುವಂತಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಸೂಚಿಸಿದರು.

ಇನ್ನೂ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಲ್ಲಿ ನಾಯಕತ್ವದ ಸಂಘರ್ಷ ಇದೆ. ಆದರೆ ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆಗಳಿಲ್ಲ. ಮುಂದಿನ ದಿನಗಳಲ್ಲಿಯೂ ಗುಂಪುಗಾರಿಕೆ ಆಗುವುದು ಬೇಡ. ಸಚಿವರು ಹಾಗೂ ಶಾಸಕರು ರಾಜ್ಯದಲ್ಲಿ ನ್ಯಾಯಯುತವಾಗಿ ಆಡಳಿತ ನಡೆಸಿ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago