Mysore
27
overcast clouds

Social Media

ಸೋಮವಾರ, 06 ಜುಲೈ 2026
Light
Dark

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು ಸಭಾತ್ಯಾಗ ನಡೆಸಿ ಹೊರನಡೆದಿದ್ದಾರೆ.

ಸರ್ಕಾರದ ಸಚಿವರುಗಳು ಸಮರ್ಪಕ ಉತ್ತರ ನೀಡದೇ ಇರುವುದು, ಪದೇ ಪದೇ ಕಲಾಪಕ್ಕೆ ಗೈರಾಗುತ್ತಿರುವುದಕ್ಕೆ ಸಿಟ್ಟಾದ ಸ್ಪೀಕರ್‌ ಅವರು ಅರ್ಧದಿಂದಲೇ ಕಲಾಪದಿಂದ ಹೊರ ನಡೆದರು.

ಅರ್ಧದಿಂದ ಎದ್ದು ಹೋದ ಬೆನ್ನಲ್ಲೇ ಸ್ಪೀಕರ್‌ ಕೊಠಡಿಯಲ್ಲಿ ಸಿಎಂ, ಸಚಿವರು, ವಿಪಕ್ಷ ನಾಯಕರು ಯು.ಟಿ.ಖಾದರ್‌ ಬಳಿ ಸಭೆ ನಡೆಸಿದರು. ಸ್ಪೀಕರ್‌ ಜೊತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸಂಧಾನ ನಡೆಸಿದರು. ಸ್ಪೀಕರ್‌ ಜೊತೆ ಕುಳಿತ ಸಚಿವರು ಸದನ ಸೂಕ್ತ ರೀತಿಯಲ್ಲಿ ನಡೆಸಲು ತಮ್ಮಿಂದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

Tags:
error: Content is protected !!