ರಾಜ್ಯ

ಸಿಎಂ ಸಿದ್ದರಾಮಯ್ಯ ಮುಂದೆ ನಕ್ಸಲರ ಶರಣಾಗತಿ ಸಂಶಯ ಮೂಡಿಸುತ್ತಿದೆ: ಕೆ.ಅಣ್ಣಾಮಲೈ

ಉಡುಪಿ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಮುಂದೆ ನಕ್ಸಲರು ಶರಣಾಗುವುದು ಕಾನೂನು ರೀತಿಯ ಕ್ರಮ. ಆದರೆ ಸಿಎಂ ಮುಂದೆ ನಕ್ಸಲರು ಶರಣಾಗಿರುವುದನ್ನು ನೋಡಿದರೆ ಹಲವು ಸಂಶಯಗಳು ಮೂಡುತ್ತಿವೆ ಎಂದು ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಈ ಬಗ್ಗೆ ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎನ್‌ಕೌಂಟರ್‌ ಶುರು ಮಾಡಿದ ಬಳಿಕ ಸರ್ಕಾರವು ನಕ್ಸಲರನ್ನು ಶರಣಾಗತಿ ಮಾಡಿಸುತ್ತಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದರು.

ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿ ರಾಜ್ಯದಲ್ಲಿದೆ. ನಕ್ಸಲರೇ ತಮ್ಮ ಕಾರ್ಯ ಚಟುವಟಿಕೆಗಳನ್ನು ಬಿಟ್ಟು, ಸಹಜ ಬದುಕಿಗೆ ಮರಳಲು ನಿರ್ಧಾರ ಮಾಡಿದರೆ ಅವರಿಗೆ ದಾರಿ ಮಾಡಿಕೊಡುವುದು ಈ ಕಾನೂನಿನ ಮೂಲ ಉದ್ದೇಶವಾಗಿದೆ.

ಆದರೆ ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಸರ್ಕಾರವು ನಕ್ಸಲರಿಗೆ ಶರಣಾಗತಿ ಪ್ರಕ್ರಿಯೆಗಳನ್ನು ಸುಲಭ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

1 hour ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

2 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

2 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

2 hours ago