ಬೆಂಗಳೂರು: ರಾಜ್ಯದ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಇಂದು ಶಸ್ತ್ರಸ್ತ್ರ ತ್ಯಜಿಸಿ ಶರಣಾಗುತ್ತಿದ್ದಾರೆ. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯು ಕಾರ್ಯಕ್ರಮ ಏರ್ಪಡಿಸಿ ಕಾದಿತ್ತು. ಇದೀಗ ಈ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಗೊಂಡಿದೆ.
ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ಶರಣಾಗತಿಯ ಆರು ನಕ್ಸಲರು ಬರುತ್ತಿದ್ದರು. ಈ ವೇಳೆ ಸಿಎಂ ಸೂಚನೆ ಮೇರೆಗೆ ಎಲ್ಲರನ್ನೂ ಪೊಲೀಸರು ಬೆಂಗಳೂರಿಗೆ ಕರೆದೊಯ್ದರು.
ತಮ್ಮ ಸಮ್ಮುಖದಲ್ಲೇ ನಕ್ಸಲರು ಮುಖ್ಯವಾಹಿನಿಗೆ ಬರಲಿ ಸಿಎಂ ಸಿದ್ದರಾಮಯ್ಯ ಅವರು ಬಯಸಿದ್ದಾರೆ. ಹೀಗಾಗಿ ಬೆಂಗಳೂರಿಗೆ ಕಾರ್ಯಕ್ರಮ ಸ್ಥಳಾಂತರ ಆಗಿದೆ ಎಂದು ಶಾಂತಿಗಾಗಿ ನಾಗರಿಕರ ವೇದಿಕೆಯ ಅಶೋಕ್ ಹೇಳಿದರು.
ನಕ್ಸಲರ ಕುಟುಂಬ ಸದಸ್ಯರನ್ನೂ ಬೆಂಗಳೂರಿಗೆ ಪೊಲೀಸ್ ವಾಹನಗಳಲ್ಲೇ ಕರೆದೊಯ್ಯಲಾಯಿತು.
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…