ರಾಜ್ಯ

ನಕ್ಸಲರ ಶರಣಾಗತಿ: ದಿಢೀರ್‌ ಬೆಂಗಳೂರಿಗೆ ಸ್ಥಳಾಂತರ

ಬೆಂಗಳೂರು: ರಾಜ್ಯದ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಇಂದು ಶಸ್ತ್ರಸ್ತ್ರ ತ್ಯಜಿಸಿ ಶರಣಾಗುತ್ತಿದ್ದಾರೆ. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯು ಕಾರ್ಯಕ್ರಮ ಏರ್ಪಡಿಸಿ ಕಾದಿತ್ತು. ಇದೀಗ ಈ ಕಾರ್ಯಕ್ರಮ ದಿಢೀರ್‌ ಬೆಂಗಳೂರಿಗೆ ವರ್ಗಾವಣೆಗೊಂಡಿದೆ.

ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ಶರಣಾಗತಿಯ ಆರು ನಕ್ಸಲರು ಬರುತ್ತಿದ್ದರು. ಈ ವೇಳೆ ಸಿಎಂ ಸೂಚನೆ ಮೇರೆಗೆ ಎಲ್ಲರನ್ನೂ ಪೊಲೀಸರು ಬೆಂಗಳೂರಿಗೆ ಕರೆದೊಯ್ದರು.

ತಮ್ಮ ಸಮ್ಮುಖದಲ್ಲೇ ನಕ್ಸಲರು ಮುಖ್ಯವಾಹಿನಿಗೆ ಬರಲಿ ಸಿಎಂ ಸಿದ್ದರಾಮಯ್ಯ ಅವರು ಬಯಸಿದ್ದಾರೆ. ಹೀಗಾಗಿ ಬೆಂಗಳೂರಿಗೆ ಕಾರ್ಯಕ್ರಮ ಸ್ಥಳಾಂತರ ಆಗಿದೆ ಎಂದು ಶಾಂತಿಗಾಗಿ ನಾಗರಿಕರ ವೇದಿಕೆಯ ಅಶೋಕ್‌ ಹೇಳಿದರು.

ನಕ್ಸಲರ ಕುಟುಂಬ ಸದಸ್ಯರನ್ನೂ ಬೆಂಗಳೂರಿಗೆ ಪೊಲೀಸ್‌ ವಾಹನಗಳಲ್ಲೇ ಕರೆದೊಯ್ಯಲಾಯಿತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

11 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

11 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

14 hours ago