ರಾಜ್ಯ

ಅ.31 ರವರೆಗೆ ಸಮೀಕ್ಷೆ ವಿಸ್ತರಣೆ

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಮೂರು ಜಿಲ್ಲೆಗಳಲ್ಲಿ ಗಣತಿ ಕುಂಠಿತವಾಗಿದ್ದು, ಈ ಹಿನ್ನಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಜಾತಿಗಣತಿಯನ್ನು ಅಕ್ಟೋಬರ್ 7ರ ಒಳಗೆ ಮುಕ್ತಾಯಗೊಳಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದ ಹಿನ್ನಲೆ ಅಕ್ಟೋಬರ್​ 18ರ ವರೆಗೆ ಜಾತಿ ಸಮೀಕ್ಷೆ ಕಾರ್ಯ ವಿಸ್ತರಣೆಗೊಂಡಿತ್ತು.ಬೆಂಗಳೂರನ್ನು ಹೊರತುಪಡಿಸಿ ಇಲ್ಲಿಯವರೆಗೆ ಬಹುತೇಕ ಜಿಲ್ಲೆಗಳಲ್ಲಿ ಶೇ.95ರಷ್ಟು ಸಮೀಕ್ಷೆ ಕಾರ್ಯ ಮುಗಿದಿದೆ.

ರಾಮನಗರ, ಬೀದರ್, ಧಾರವಾಡದಲ್ಲಿ ಇದರ ಪ್ರಮಾಣ ಶೇ. 90ಕ್ಕಿಂತ ಕಡಿಮೆ ಆಗಿದೆ. ಬೆಂಗಳೂರಲ್ಲಿ ಗಣತಿ ಕಾರ್ಯ ಅತ್ಯಂತ ನಿಧಾನವಾಗಿ ನಡೆಯುತ್ತಿದ್ದು ಈವರೆಗೆ ಕೇವಲ ಶೇ.45ರಷ್ಟು ಮನೆಗಳ ಸಮೀಕ್ಷೆ ಮಾತ್ರ ಮುಗಿದಿದೆ. ಈ ನಡುವೆ ದೀಪಾವಳಿ ಹಬ್ಬದ ರಜೆಯೂ ಬಂದಿರುವುದರಿಂದ ಸಮೀಕ್ಷೆ ವಿಸ್ತರಣೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್​ 31ರ ಒಳಗೆ ಕಡ್ಡಾಯವಾಗಿ ಸಮೀಕ್ಷೆ ಮುಗಿಯಬೇಕು ಎಂಬ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸಿಎಂ ಸೂಚನೆ ಕೊಟ್ಟಿದ್ದಾರೆ.

ಇದನ್ನು ಓದಿ: ಸಿಎಂ ಕಾವೇರಿ ನಿವಾಸದಲ್ಲಿ ಸಮೀಕ್ಷೆ : ವಿವರ ನೀಡಿದ ಸಿಎಂ

ಸಮೀಕ್ಷೆಯಿಂದ ಶಿಕ್ಷಕರಿಗೆ ಬಿಡುಗಡೆ
ಸಮೀಕ್ಷೆ ಅವಧಿ ವಿಸ್ತರಣೆ ಬೆನ್ನಲ್ಲೇ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಗಣತಿ ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆ ಸಿಬ್ಬಂದಿ ಬಳಸಿಕೊಂಡು ಬಾಕಿ ಉಳಿದಿರುವ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ನಿಗದಿತ ಅವಧಿಯೊಳಗೆ ಜಾತಿ ಗಣತಿ ಕಾರ್ಯ ಮುಗಿಯದ ಕಾರಣ ಈ ಹಿಂದೆ ಸರ್ಕಾರ ಅವಧಿಯನ್ನ ವಿಸ್ತರಿಸಿತ್ತು. ಆದರೆ ಆಗ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಕೈ ಬಿಟ್ಟಿರಲಿಲ್ಲ. ಬದಲಾಗಿ ಶಾಲೆಗಳ ರಜಾ ಅವಧಿಯನ್ನೇ ವಿಸ್ತರಿಸಿತ್ತು. ಆದರೆ ಈಗ ಶಾಲೆಗಳು ಆರಂಭವಾಗಿರುವ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅ.21-23ರ ವರೆಗೆ ಸಮೀಕ್ಷೆಗೆ ಬ್ರೇಕ್​
ಸಮೀಕ್ಷೆ ಇನ್ನೂ ಅವಕಾಶ ನೀಡಲಾಗುತ್ತಿದ್ದು, ಯಾರು ಭಾಗಹಿಸಲ್ಲವೋ ಅವರು ಭಾಗವಹಿಸಿ. ಎಲ್ಲಾ ಸಮಾಜದವರು ಇರುವ ಅವಕಾಶ ಕಳೆದುಕೊಳ್ಳೋಕೆ ಹೋಗಬೇಡಿ. ಅ.21-23ರ ವರೆಗೆ ದೀಪಾವಳಿ ಹಿನ್ನಲೆ ಸಮೀಕ್ಷೆ ಇರಲ್ಲ. ಬೆಂಗಳೂರು ಸೌತ್, ಬೀದರ್, ಧಾರವಾಡ ಬಿಟ್ಟು ಉಳಿದ ಕಡೆ ಗಣತಿ ಕಾರ್ಯ ಚೆನ್ನಾಗಿ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago