ರಾಜ್ಯ

ಅ.31 ರವರೆಗೆ ಸಮೀಕ್ಷೆ ವಿಸ್ತರಣೆ

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಮೂರು ಜಿಲ್ಲೆಗಳಲ್ಲಿ ಗಣತಿ ಕುಂಠಿತವಾಗಿದ್ದು, ಈ ಹಿನ್ನಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಜಾತಿಗಣತಿಯನ್ನು ಅಕ್ಟೋಬರ್ 7ರ ಒಳಗೆ ಮುಕ್ತಾಯಗೊಳಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದ ಹಿನ್ನಲೆ ಅಕ್ಟೋಬರ್​ 18ರ ವರೆಗೆ ಜಾತಿ ಸಮೀಕ್ಷೆ ಕಾರ್ಯ ವಿಸ್ತರಣೆಗೊಂಡಿತ್ತು.ಬೆಂಗಳೂರನ್ನು ಹೊರತುಪಡಿಸಿ ಇಲ್ಲಿಯವರೆಗೆ ಬಹುತೇಕ ಜಿಲ್ಲೆಗಳಲ್ಲಿ ಶೇ.95ರಷ್ಟು ಸಮೀಕ್ಷೆ ಕಾರ್ಯ ಮುಗಿದಿದೆ.

ರಾಮನಗರ, ಬೀದರ್, ಧಾರವಾಡದಲ್ಲಿ ಇದರ ಪ್ರಮಾಣ ಶೇ. 90ಕ್ಕಿಂತ ಕಡಿಮೆ ಆಗಿದೆ. ಬೆಂಗಳೂರಲ್ಲಿ ಗಣತಿ ಕಾರ್ಯ ಅತ್ಯಂತ ನಿಧಾನವಾಗಿ ನಡೆಯುತ್ತಿದ್ದು ಈವರೆಗೆ ಕೇವಲ ಶೇ.45ರಷ್ಟು ಮನೆಗಳ ಸಮೀಕ್ಷೆ ಮಾತ್ರ ಮುಗಿದಿದೆ. ಈ ನಡುವೆ ದೀಪಾವಳಿ ಹಬ್ಬದ ರಜೆಯೂ ಬಂದಿರುವುದರಿಂದ ಸಮೀಕ್ಷೆ ವಿಸ್ತರಣೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್​ 31ರ ಒಳಗೆ ಕಡ್ಡಾಯವಾಗಿ ಸಮೀಕ್ಷೆ ಮುಗಿಯಬೇಕು ಎಂಬ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸಿಎಂ ಸೂಚನೆ ಕೊಟ್ಟಿದ್ದಾರೆ.

ಇದನ್ನು ಓದಿ: ಸಿಎಂ ಕಾವೇರಿ ನಿವಾಸದಲ್ಲಿ ಸಮೀಕ್ಷೆ : ವಿವರ ನೀಡಿದ ಸಿಎಂ

ಸಮೀಕ್ಷೆಯಿಂದ ಶಿಕ್ಷಕರಿಗೆ ಬಿಡುಗಡೆ
ಸಮೀಕ್ಷೆ ಅವಧಿ ವಿಸ್ತರಣೆ ಬೆನ್ನಲ್ಲೇ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಗಣತಿ ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆ ಸಿಬ್ಬಂದಿ ಬಳಸಿಕೊಂಡು ಬಾಕಿ ಉಳಿದಿರುವ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ನಿಗದಿತ ಅವಧಿಯೊಳಗೆ ಜಾತಿ ಗಣತಿ ಕಾರ್ಯ ಮುಗಿಯದ ಕಾರಣ ಈ ಹಿಂದೆ ಸರ್ಕಾರ ಅವಧಿಯನ್ನ ವಿಸ್ತರಿಸಿತ್ತು. ಆದರೆ ಆಗ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಕೈ ಬಿಟ್ಟಿರಲಿಲ್ಲ. ಬದಲಾಗಿ ಶಾಲೆಗಳ ರಜಾ ಅವಧಿಯನ್ನೇ ವಿಸ್ತರಿಸಿತ್ತು. ಆದರೆ ಈಗ ಶಾಲೆಗಳು ಆರಂಭವಾಗಿರುವ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅ.21-23ರ ವರೆಗೆ ಸಮೀಕ್ಷೆಗೆ ಬ್ರೇಕ್​
ಸಮೀಕ್ಷೆ ಇನ್ನೂ ಅವಕಾಶ ನೀಡಲಾಗುತ್ತಿದ್ದು, ಯಾರು ಭಾಗಹಿಸಲ್ಲವೋ ಅವರು ಭಾಗವಹಿಸಿ. ಎಲ್ಲಾ ಸಮಾಜದವರು ಇರುವ ಅವಕಾಶ ಕಳೆದುಕೊಳ್ಳೋಕೆ ಹೋಗಬೇಡಿ. ಅ.21-23ರ ವರೆಗೆ ದೀಪಾವಳಿ ಹಿನ್ನಲೆ ಸಮೀಕ್ಷೆ ಇರಲ್ಲ. ಬೆಂಗಳೂರು ಸೌತ್, ಬೀದರ್, ಧಾರವಾಡ ಬಿಟ್ಟು ಉಳಿದ ಕಡೆ ಗಣತಿ ಕಾರ್ಯ ಚೆನ್ನಾಗಿ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

2 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

2 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

2 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

3 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

3 hours ago