ರಾಜ್ಯ

ಸಮೀಕ್ಷೆ | PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ : ಸಿಎಂ

ಬೆಂಗಳೂರು : ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೊಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ, ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ ಎಂದರು.

ಇದನ್ನು ಓದಿ :  ರಾಜ್ಯದಲ್ಲಿ ಅಕ್ಟೋಬರ್.‌12ರವರೆಗೆ ಸಮೀಕ್ಷೆ ಅವಧಿ ವಿಸ್ತರಣೆ

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ. ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು‌.

ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

2 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

2 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

3 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

3 hours ago