ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ.
ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ.
ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಸಂಕ್ರಾಂತಿಯ ದಿನದಂದು ಸಂಜೆ ಸೂರ್ಯದೇವ ದೇವಾಲಯದ ಗರ್ಭಗುಡಿಯ ಮೂಲಕ ತನ್ನ ರಶ್ಮಿಯನ್ನು ಗಂಗಾಧರನಿಗೆ ಸ್ಪರ್ಶಿಸುವ ಮೂಲಕ ಸೂರ್ಯರಶ್ಮಿಯ ಅಭಿಷೇಕ ಮಾಡಿದ್ದಾನೆ.
ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 18 ನಿಮಿಷಕ್ಕೆ ಸ್ಪರ್ಶಿಸಿದೆ. ಗರ್ಭಗುಡಿಯ ಮುಂಭಾಗದಲ್ಲಿರುವ ನಂದಿಯ ವಿಗ್ರಹದ ಎರಡು ಕೊಂಬುಗಳ ಮೂಲಕವಾಗಿ ಸೂರ್ಯನ ಕಿರಣಗಳು ಮುಖ್ಯದ್ವಾರವನ್ನು ದಾಟಿ ಶಿವಲಿಂಗವನ್ನು ಸ್ಪರ್ಶಿಸಿವೆ.
ಈ ಮೂಲಕ ಸೂರ್ಯದೇವರು ಶಿವ ದೇವರಿಗೆ ನಮಸ್ಕರಿಸಿ ಅಭಿಷೇಕ ಮಾಡಿ ಮುಂದೆ ಚಲಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಸ್ಮಯಕಾರಿ ಬೆಳಕಿನ ಕೌತುಕವನ್ನು ನೂರಾರು ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…