ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ.
ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ.
ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಸಂಕ್ರಾಂತಿಯ ದಿನದಂದು ಸಂಜೆ ಸೂರ್ಯದೇವ ದೇವಾಲಯದ ಗರ್ಭಗುಡಿಯ ಮೂಲಕ ತನ್ನ ರಶ್ಮಿಯನ್ನು ಗಂಗಾಧರನಿಗೆ ಸ್ಪರ್ಶಿಸುವ ಮೂಲಕ ಸೂರ್ಯರಶ್ಮಿಯ ಅಭಿಷೇಕ ಮಾಡಿದ್ದಾನೆ.
ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 18 ನಿಮಿಷಕ್ಕೆ ಸ್ಪರ್ಶಿಸಿದೆ. ಗರ್ಭಗುಡಿಯ ಮುಂಭಾಗದಲ್ಲಿರುವ ನಂದಿಯ ವಿಗ್ರಹದ ಎರಡು ಕೊಂಬುಗಳ ಮೂಲಕವಾಗಿ ಸೂರ್ಯನ ಕಿರಣಗಳು ಮುಖ್ಯದ್ವಾರವನ್ನು ದಾಟಿ ಶಿವಲಿಂಗವನ್ನು ಸ್ಪರ್ಶಿಸಿವೆ.
ಈ ಮೂಲಕ ಸೂರ್ಯದೇವರು ಶಿವ ದೇವರಿಗೆ ನಮಸ್ಕರಿಸಿ ಅಭಿಷೇಕ ಮಾಡಿ ಮುಂದೆ ಚಲಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಸ್ಮಯಕಾರಿ ಬೆಳಕಿನ ಕೌತುಕವನ್ನು ನೂರಾರು ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…