ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ.
ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ.
ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಸಂಕ್ರಾಂತಿಯ ದಿನದಂದು ಸಂಜೆ ಸೂರ್ಯದೇವ ದೇವಾಲಯದ ಗರ್ಭಗುಡಿಯ ಮೂಲಕ ತನ್ನ ರಶ್ಮಿಯನ್ನು ಗಂಗಾಧರನಿಗೆ ಸ್ಪರ್ಶಿಸುವ ಮೂಲಕ ಸೂರ್ಯರಶ್ಮಿಯ ಅಭಿಷೇಕ ಮಾಡಿದ್ದಾನೆ.
ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 18 ನಿಮಿಷಕ್ಕೆ ಸ್ಪರ್ಶಿಸಿದೆ. ಗರ್ಭಗುಡಿಯ ಮುಂಭಾಗದಲ್ಲಿರುವ ನಂದಿಯ ವಿಗ್ರಹದ ಎರಡು ಕೊಂಬುಗಳ ಮೂಲಕವಾಗಿ ಸೂರ್ಯನ ಕಿರಣಗಳು ಮುಖ್ಯದ್ವಾರವನ್ನು ದಾಟಿ ಶಿವಲಿಂಗವನ್ನು ಸ್ಪರ್ಶಿಸಿವೆ.
ಈ ಮೂಲಕ ಸೂರ್ಯದೇವರು ಶಿವ ದೇವರಿಗೆ ನಮಸ್ಕರಿಸಿ ಅಭಿಷೇಕ ಮಾಡಿ ಮುಂದೆ ಚಲಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಸ್ಮಯಕಾರಿ ಬೆಳಕಿನ ಕೌತುಕವನ್ನು ನೂರಾರು ಭಕ್ತರು ಕಣ್ತುಂಬಿಕೊಂಡಿದ್ದಾರೆ.
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…
ನವದೆಹಲಿ : ವಾಷಿಂಗ್ಟನ್ನ ಹಿಲ್ಟನ್ ಹೋಟೆಲ್ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…
ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…