ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ.
ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ.
ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಸಂಕ್ರಾಂತಿಯ ದಿನದಂದು ಸಂಜೆ ಸೂರ್ಯದೇವ ದೇವಾಲಯದ ಗರ್ಭಗುಡಿಯ ಮೂಲಕ ತನ್ನ ರಶ್ಮಿಯನ್ನು ಗಂಗಾಧರನಿಗೆ ಸ್ಪರ್ಶಿಸುವ ಮೂಲಕ ಸೂರ್ಯರಶ್ಮಿಯ ಅಭಿಷೇಕ ಮಾಡಿದ್ದಾನೆ.
ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 18 ನಿಮಿಷಕ್ಕೆ ಸ್ಪರ್ಶಿಸಿದೆ. ಗರ್ಭಗುಡಿಯ ಮುಂಭಾಗದಲ್ಲಿರುವ ನಂದಿಯ ವಿಗ್ರಹದ ಎರಡು ಕೊಂಬುಗಳ ಮೂಲಕವಾಗಿ ಸೂರ್ಯನ ಕಿರಣಗಳು ಮುಖ್ಯದ್ವಾರವನ್ನು ದಾಟಿ ಶಿವಲಿಂಗವನ್ನು ಸ್ಪರ್ಶಿಸಿವೆ.
ಈ ಮೂಲಕ ಸೂರ್ಯದೇವರು ಶಿವ ದೇವರಿಗೆ ನಮಸ್ಕರಿಸಿ ಅಭಿಷೇಕ ಮಾಡಿ ಮುಂದೆ ಚಲಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಸ್ಮಯಕಾರಿ ಬೆಳಕಿನ ಕೌತುಕವನ್ನು ನೂರಾರು ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…