ರಾಜ್ಯ

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ ಎಂಬ ಅನುಮಾನಗಳು ಕಂಡು ಬಂದಿವೆ.

ಇತ್ತೀಚೆಗೆ ದಾವಣಗೆರೆ ಹಾಗೂ ತುಮಕೂರಿನಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಅವರು ನೀಡಿದ ಸುಳಿವಿನ ಮೇರೆಗೆ ಹರಿಹರದ ಕಾರ್ಖಾನೆಯೊಂದರಲ್ಲಿ ಪೈಂಟರ್ ಕೆಲಸ ಮಾಡಿಕೊಂಡು ತಲೆ ಮರೆಸಿಕೊಂಡಿದ್ದ, ಉತ್ತರಪ್ರದೇಶ ಮೂಲದ ಸುಹೈಲ್‍ನನ್ನು ಬಂಧಿಸಲಾಗಿದೆ.

ಕೇಂದ್ರ ಗುಪ್ತದಳದ ಅಧಿಕಾರಿಗಳು, ದಾವಣಗೆರೆ ಪೊಲೀಸರು ಮತ್ತು ಕ್ರೈಂ ಬ್ರ್ಯಾಂಚ್‍ನ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಶಂಕಿತನನ್ನು ಬಂಧಿಸಿದ್ದಾರೆ. ಬಿಗಿ ಭದ್ರತೆಯೊಂದಿಗೆ ಆರೋಪಿಯನ್ನು ದಾವಣಗೆರೆ ಮತ್ತು ತುಮಕೂರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗಿದೆ.

ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಮಹತ್ವದ ಮಾಹಿತಿಗಳು ಪತ್ತೆಯಾಗಿವೆ. ಪಾಕಿಸ್ತಾನದ ಕಂಟ್ರಿಕೋಡ್‍ನಲ್ಲಿ ಇರುವ ಮೊಬೈಲ್ ಸಂಖ್ಯೆಯೊಂದು ರಾಣಾಬಾಯ್ ಹೆಸರಿನಲ್ಲಿ ಸೇವ್ ಆಗಿದೆ. ಜೊತೆಗೆ ದೇಶವಿರೋಧಿ ಚಟುವಟಿಕೆಗಳಿಗೆ ಕುಮಕ್ಕು ನೀಡುವ ಮೀಮೋನ್ ಮೈಂಡ್ ಜುಟ್ಟು-333, ರಾಣಾಬಾಯ್-333 ಎಂಬ ಕೆಲ ಸಾಮಾಜಿಕ ಜಾಲತಾಣದ ಗುಂಪುಗಳಲ್ಲಿಯೂ ಸುಹೈಲ್ ಸಕ್ರಿಯ ಸದಸ್ಯನಾಗಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯ ಮೊಬೈಲ್ ಗ್ಯಾಲರಿ ಪರಿಶೀಲನೆ ವೇಳೆ ಶಸ್ತ್ರಾಸ್ತ್ರ ತರಬೇತಿ ಪಡೆದ ವ್ಯಕ್ತಿಯ ಶೈಲಿಯಲ್ಲೇ ಆಯುಧಗಳನ್ನು ಹಿಡಿದು ಫೋಟೋ ತೆಗೆಸಿಕೊಂಡಿರುವುದು ಕಂಡು ಬಂದಿದೆ. ಅಯೋಧ್ಯೆ ರಾಮಮಂದಿರ ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಆರೋಪಿಯು ಸಂಚು ನಡೆಸಿರುವುದು ವಿಚಾರಣೆಯ ವೇಳೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

 

ಆಂದೋಲನ ಡೆಸ್ಕ್

Recent Posts

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

21 mins ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

1 hour ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

1 hour ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

5 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

8 hours ago