ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸದನದಿಂದ ಆರು ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಾಪಾಸ್ ಪಡೆಯಬೇಕು ಎಂದು ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವುದು ಕಾನೂನು ಬಾಹಿರವಾಗಿದೆ. ಯಾವ ಕಾರಣಕ್ಕಾಗ ಸ್ಪೀಕರ್ ಅವರು ಅಮಾನತು ಮಾಡುವ ತೀರ್ಮಾನ ತೆಗೆದುಕೊಂಡರು? ಅವರ ಈ ನಿರ್ಧಾರ ಅಸಂವಿಧಾನತ್ಮಕ, ಏಕಪಕ್ಷೀಯ ಮತ್ತು ಮನಸೋ ಇಚ್ಛೆಯಿಂದ ತೆಗೆದುಕೊಂಡ ತೀರ್ಮಾನದಂತಿದೆ ಎಂದು ಕಿಡಿಕಾರಿದರು.
ಅಮಾನತುಗೊಂಡಿರುವ ಶಾಸಕರೇನು ಭಯೋತ್ಪಾದಕರಾ ಅಥವಾ ನಕ್ಸಲರಾ? ಇತಿಹಾಸದಲ್ಲಿ ಇಷ್ಟು ಸುದೀರ್ಘವಾಗಿ ಅಮಾನತು ಮಾಡಿರುವ ಉದಾಹರಣೆಗಳು ಇಲ್ಲ. ಆದರೆ ಸ್ಪೀಕರ್ ಆರು ತಿಂಗಳ ಕಾಲ ನಮ್ಮ 18 ಶಾಸಕರನ್ನು ಅಮಾನತು ಮಾಡಿದ್ದಾರೆ. ನಾವು ವಿರೋಧ ಪಕ್ಷದವರಾಗಿ ಸದನದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಂವಿಧಾನ ವಿರೋಧ ನಡೆಯನ್ನು ವಿರೋಧಿಸಿ ಹೋರಾಟ ಮಾಡುತ್ತಿದ್ದೇವು ಎಂದು ಹೇಳಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…