ಮೈಸೂರು: ಲೋಕಸಭೆ ಮತ್ತು ರಾಜ್ಯಸಭೆಯ ನೂರಾರು ಸಂಸದರನ್ನು ಅಮಾನತ್ತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ಈ ವೇಳೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷ ಹೇಳಿದ್ದನ್ನು ಆಢಳಿತ ಪಕ್ಷ ಕೇಳಬೇಕು ಎಂದು ಹೇಳಿದರು.
ವಿರೋಧ ಪಕ್ಷ ಹೇಳಿದ್ದನ್ನು ನಾವು ಕೇಳಲ್ಲ ಎನ್ನಲು ಸಾಧ್ಯವಿಲ್ಲ. ಜನರು ವಿರೋಧಪಕ್ಷದವರಿಗೂ ಮ್ಯಾನ್ಡೇಟ್ ಕೊಟ್ಟು ಕಳಿಸಿದ್ದಾರೆ. ಅದನ್ನು ಕಸೆದುಕೊಳ್ಳುವ ಅಧಿಕಾರ ಸ್ಪೀಕರ್ಗೂ ಇಲ್ಲ ಯಾರಿಗೂ ಇಲ್ಲ ಎಂದರು.
ನೂರಾರು ಮಂದಿ ಸಂಸದರನ್ನು ಅಮಾನತ್ತುಗೊಳಿಸಿರುವ ಘಟನೆ ಇತಿಹಾಸದಲ್ಲೆ ಇಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಮೇಲೆ ಯಾವುದೇ ರೀತಿಯ ಗೌರವ ಇಲ್ಲ. ಜನರು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದರೆ ಸಹಿಸುವುದಿಲ್ಲ. ಈ ಸರ್ಕಾರ ಸರ್ವಾಧಿಕಾರ ನಡೆಸುತ್ತಿರುವಂತೆ ಕಾಣಿಸುತ್ತಿದೆ ಎಂದರು.
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ…