ಮೈಸೂರು: ಲೋಕಸಭೆ ಮತ್ತು ರಾಜ್ಯಸಭೆಯ ನೂರಾರು ಸಂಸದರನ್ನು ಅಮಾನತ್ತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ಈ ವೇಳೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷ ಹೇಳಿದ್ದನ್ನು ಆಢಳಿತ ಪಕ್ಷ ಕೇಳಬೇಕು ಎಂದು ಹೇಳಿದರು.
ವಿರೋಧ ಪಕ್ಷ ಹೇಳಿದ್ದನ್ನು ನಾವು ಕೇಳಲ್ಲ ಎನ್ನಲು ಸಾಧ್ಯವಿಲ್ಲ. ಜನರು ವಿರೋಧಪಕ್ಷದವರಿಗೂ ಮ್ಯಾನ್ಡೇಟ್ ಕೊಟ್ಟು ಕಳಿಸಿದ್ದಾರೆ. ಅದನ್ನು ಕಸೆದುಕೊಳ್ಳುವ ಅಧಿಕಾರ ಸ್ಪೀಕರ್ಗೂ ಇಲ್ಲ ಯಾರಿಗೂ ಇಲ್ಲ ಎಂದರು.
ನೂರಾರು ಮಂದಿ ಸಂಸದರನ್ನು ಅಮಾನತ್ತುಗೊಳಿಸಿರುವ ಘಟನೆ ಇತಿಹಾಸದಲ್ಲೆ ಇಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಮೇಲೆ ಯಾವುದೇ ರೀತಿಯ ಗೌರವ ಇಲ್ಲ. ಜನರು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದರೆ ಸಹಿಸುವುದಿಲ್ಲ. ಈ ಸರ್ಕಾರ ಸರ್ವಾಧಿಕಾರ ನಡೆಸುತ್ತಿರುವಂತೆ ಕಾಣಿಸುತ್ತಿದೆ ಎಂದರು.
ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…
ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…
ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…
ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…
ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ…
ಮೈಸೂರು: ಬಾಲಿವುಡ್ನಿಂದ ಸ್ಯಾಂಡಲ್ವುಡ್ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ಕೊರಿಯೋಗ್ರಾಫರ್ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್…