ರಾಜ್ಯ

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ಬೆಂಗಳೂರು : ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಆದೇಶ ಹೊರಡಿಸಿದ್ದಾರೆ.

‌ಲಂಚ ಸ್ವೀಕಾರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಬಿಐ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ ಎಂದು ವರದಿ ಮಾಡಿದೆ. ಈ ಕುರಿತು ಸಿಬಿಐ ಇಲಾಖೆಗೆ ಈ-ಮೇಲ್‌ ಮೂಲಕ ಮಾಹಿತಿ ರವಾನಿಸಿದೆ.

ಈ ಹಿನ್ನೆಲೆಯಲ್ಲಿ ಈ ಮೂವರ ಅಮಾನತಿಗೆ ಇಲಾಖೆಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಡಾ. ಚೈತ್ರ, ಡಾ. ಮಂಜಪ್ಪ, ಡಾ. ಅಶೋಕ್‌ ಶೆಲ್ಕೆ ಅವರು ಛತ್ತೀಸ್‌ಗಡ ರವತ್‌ಪುರ ಸರ್ಕಾರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕ್‌ ಸೈನ್ಸ್‌ ಅಂಡ್‌ ರೀಸರ್ಚ್‌ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿಯನ್ನು ನೀಡುವ ಸಂಬಂಧ ಲಂಚ ಪಡೆದಿರುತ್ತಾರೆ. ಇವರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಎಲ್ಲ ವಿಷಯಗಳನ್ನು ಕೂಲಂಕಶವಾಗಿ ಪರಿಶೀಲಿಸಿದ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮೂವರು ವೈದ್ಯರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

51 mins ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

1 hour ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

2 hours ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

3 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago